ಓದುಗರ ಪತ್ರ

ಓದುಗರ ಪತ್ರ | ಮಾಧ್ಯಮಗಳ ನಡೆ ಪ್ರಶಂಸನೀಯ

ಶಸ್ತ್ರಚಿಕಿತ್ಸೆಗೆಂದು ಅಮೆರಿಕದ ಫ್ಲೋರಿಡಾ ಆಸ್ಪತ್ರೆಗೆ ತೆರಳಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್‌ಕುಮಾರ್‌ರವರು ಶಸಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಶಿವರಾಜ್ ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಭಿಮಾನಿಗಳಿಗೆ ಆತಂಕ ಎದುರಾಗಿತ್ತು. ಇಂತಹ ಸಂದರ್ಭದಲ್ಲಿ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರು ಸುದ್ದಿಯನ್ನು ವೈಭವೀಕರಿಸದೆ ತೀರಾ ಸೂಕ್ಷ ವಾಗಿ ಸುದ್ದಿ ಪ್ರಸಾರ ಮಾಡಿದ್ದು, ಜವಾಬ್ದಾರಿಯುತವಾಗಿ ವರ್ತಿಸಿರುವುದು ಉತ್ತಮ ಬೆಳವಣಿಗೆ. ಈ ಬಗ್ಗೆ ಸ್ವತಃ ಶಿವರಾಜ್ ಕುಮಾರ್‌ರವರೂ ಸಮಾಧಾನ ವ್ಯಕ್ತಪಡಿಸಿದ್ದಾರೆ. ಮನುಷ್ಯ ಅಂದ ಮೇಲೆ ಕಾಯಿಲೆ ಬರುವುದು ಸಹಜ. ಮಾಧ್ಯಮ ಅದನ್ನೇ ದೊಡ್ಡ ಸುದ್ದಿಯನ್ನಾಗಿಸಿಕೊಂಡು ಪ್ರಚಾರ ತೆಗೆದುಕೊಳ್ಳುವುದು ಇತ್ತೀಚೆಗೆ ಮಾಮೂಲಿ ಎನ್ನುವಂತಾಗಿದೆ. ಕೆಲವು ತಿಂಗಳ ಹಿಂದೆ ನಿಧನರಾದ ಕನ್ನಡದ ಸುಪ್ರಸಿದ್ಧ ನಿರೂಪಕಿ ಹಾಗೂ ನಟಿ ಅಪರ್ಣಾ ಕೂಡ ಗಂಭೀರವಾದ ಕಾಯಿಲೆಯಿಂದ ಬಳಲುತ್ತಿದ್ದರೂ ಅದರ ಬಗ್ಗೆ ಜನರಿಗೆ ಗೊತ್ತಿರಲಿಲ್ಲ. ಕೆಲವು ಸೂಕ್ಷ ಆರೋಗ್ಯ ಸಮಸ್ಯೆಗಳು ಬಹಿರಂಗಗೊಂಡರೆ ಆ ವ್ಯಕ್ತಿಗಳಿಗೆ ಮಾನಸಿಕವಾಗಿ ಕಿರಿಕಿರಿಯಾಗುತ್ತದೆ. ಈ ವಿಚಾರದಲ್ಲಿ ಮಾಧ್ಯಮದವರು ನಡೆದುಕೊಂಡ ರೀತಿ ಮೆಚ್ಚುವಂತದ್ದು. ಕನ್ನಡಿಗರ ನೆಚ್ಚಿನ ಶಿವಣ್ಣ ಆದಷ್ಟು ಬೇಗ ಚೇತರಿಸಿಕೊಂಡು ಸ್ವದೇಶಕ್ಕೆ ಮರಳುವಂತಾಗಲಿ.
-ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago