ಓದುಗರ ಪತ್ರ

ಓದುಗರ ಪತ್ರ| ವಿವಿಗಳ ವಿಲೀನ ಸ್ವಾಗತಾರ್ಹ

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯು ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ೯ ವಿಶ್ವವಿದ್ಯಾನಿಲಯಗಳನ್ನು ಮತ್ತೆ ಹಳೇ ವಿವಿಗಳ ಜೊತೆಗೆ ವಿಲೀನಗೊಳಿಸಲು ಮುಂದಾಗಿರು ವುದು ಶೈಕ್ಷಣಿಕ ಪ್ರಗತಿ ಮತ್ತು ಸಂಶೋಧನೆಗಳಿಗೆ ಪೂರಕವಾಗಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಸರ್ಕಾರ ಹೊಸ ವಿಶ್ವವಿದ್ಯಾನಿಲಯಗಳನ್ನು ಘೋಷಣೆ ಮಾಡಿದ್ದನ್ನು ಬಿಟ್ಟರೆ ಆ ವಿವಿಗಳಿಗೆ ಬೇಕಾದ ಅಗತ್ಯ ಮೂಲ ಸೌಕರ್ಯಗಳು ಮತ್ತು ಅನುದಾನವನ್ನು ಒದಗಿಸಲಿಲ್ಲ.

ಇದರಿಂದಾಗಿ ಗುಣಮಟ್ಟದ ಸಂಶೋಧನೆ ಮತ್ತು ವಿಶ್ವವಿದ್ಯಾನಿಲಯಗಳ ಅಭಿವೃದ್ಧಿ ಸಾಧ್ಯವಾಗಿರಲಿಲ್ಲ. ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ಣುಡಿಯಂತೆ ವಿಶ್ವವಿದ್ಯಾನಿಲಯಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬೌದ್ಧಿಕ ವಿಕಸನ ಮತ್ತು ಸಾಂಸ್ಕೃತಿಕ ವಿನಿಮಯದ ಕೇಂದ್ರವಾಗಿರುವುದರಿಂದ ವಿವಿಗಳ ಅಭಿವೃದ್ಧಿ ಮುಖ್ಯ. ಈ ನಿಟ್ಟಿನಲ್ಲಿ ಡಿಕೆಶಿಯವರು ತೆಗೆದುಕೊಂಡಿರುವ ತೀರ್ಮಾನ ಅಭಿವೃದ್ಧಿಗೆ ಪೂರಕವಾಗಲಿದೆ. ಜಿಲ್ಲೆಗೊಂದು ವಿವಿಗಳು ಸ್ಥಾಪನೆಯಾದರೆ ಹಳೆಯ ಮತ್ತು ಹೊಸ ವಿವಿಗಳೆರಡರಲ್ಲೂ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಇಳಿಮುಖವಾಗುತ್ತದೆ. ಅಲ್ಲದೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಕಷ್ಟವಾಗುತ್ತದೆ. ಈಗಿರುವ ವಿವಿಗಳಲ್ಲಿಯೇ ಬೋಧಕರ ಮತ್ತು ಸಂಶೋಧನೆಯ ಕೊರತೆ ಎದ್ದುಕಾಣುತ್ತಿರುವ ಈ ಸಂದರ್ಭದಲ್ಲಿ ಇರುವ ಎಲ್ಲ ವಿವಿಗಳನ್ನೂ ಬಲಪಡಿಸುವಲ್ಲಿ ಸರ್ಕಾರ ಅಗತ್ಯಕ್ರಮ ವಹಿಸಿ ವಿವಿಗಳ ಘನತೆಯನ್ನು ಕಾಪಾಡಿಕೊಳ್ಳುವುದು ಔಚಿತ್ಯಪೂರ್ಣ. -ಡಾ. ಡಿ. ಶ್ರೀನಿವಾಸ ಮಣಗಳ್ಳಿ, ಸಹಾಯಕ ಪ್ರಾಧ್ಯಾಪಕರು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿ.

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

34 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

39 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

44 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

48 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

54 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

55 mins ago