ಓದುಗರ ಪತ್ರ

ಓದುಗರ ಪತ್ರ| ವಿವಿಗಳ ವಿಲೀನ ಸ್ವಾಗತಾರ್ಹ

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯು ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ೯ ವಿಶ್ವವಿದ್ಯಾನಿಲಯಗಳನ್ನು ಮತ್ತೆ ಹಳೇ ವಿವಿಗಳ ಜೊತೆಗೆ ವಿಲೀನಗೊಳಿಸಲು ಮುಂದಾಗಿರು ವುದು ಶೈಕ್ಷಣಿಕ ಪ್ರಗತಿ ಮತ್ತು ಸಂಶೋಧನೆಗಳಿಗೆ ಪೂರಕವಾಗಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಸರ್ಕಾರ ಹೊಸ ವಿಶ್ವವಿದ್ಯಾನಿಲಯಗಳನ್ನು ಘೋಷಣೆ ಮಾಡಿದ್ದನ್ನು ಬಿಟ್ಟರೆ ಆ ವಿವಿಗಳಿಗೆ ಬೇಕಾದ ಅಗತ್ಯ ಮೂಲ ಸೌಕರ್ಯಗಳು ಮತ್ತು ಅನುದಾನವನ್ನು ಒದಗಿಸಲಿಲ್ಲ.

ಇದರಿಂದಾಗಿ ಗುಣಮಟ್ಟದ ಸಂಶೋಧನೆ ಮತ್ತು ವಿಶ್ವವಿದ್ಯಾನಿಲಯಗಳ ಅಭಿವೃದ್ಧಿ ಸಾಧ್ಯವಾಗಿರಲಿಲ್ಲ. ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ಣುಡಿಯಂತೆ ವಿಶ್ವವಿದ್ಯಾನಿಲಯಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬೌದ್ಧಿಕ ವಿಕಸನ ಮತ್ತು ಸಾಂಸ್ಕೃತಿಕ ವಿನಿಮಯದ ಕೇಂದ್ರವಾಗಿರುವುದರಿಂದ ವಿವಿಗಳ ಅಭಿವೃದ್ಧಿ ಮುಖ್ಯ. ಈ ನಿಟ್ಟಿನಲ್ಲಿ ಡಿಕೆಶಿಯವರು ತೆಗೆದುಕೊಂಡಿರುವ ತೀರ್ಮಾನ ಅಭಿವೃದ್ಧಿಗೆ ಪೂರಕವಾಗಲಿದೆ. ಜಿಲ್ಲೆಗೊಂದು ವಿವಿಗಳು ಸ್ಥಾಪನೆಯಾದರೆ ಹಳೆಯ ಮತ್ತು ಹೊಸ ವಿವಿಗಳೆರಡರಲ್ಲೂ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಇಳಿಮುಖವಾಗುತ್ತದೆ. ಅಲ್ಲದೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಕಷ್ಟವಾಗುತ್ತದೆ. ಈಗಿರುವ ವಿವಿಗಳಲ್ಲಿಯೇ ಬೋಧಕರ ಮತ್ತು ಸಂಶೋಧನೆಯ ಕೊರತೆ ಎದ್ದುಕಾಣುತ್ತಿರುವ ಈ ಸಂದರ್ಭದಲ್ಲಿ ಇರುವ ಎಲ್ಲ ವಿವಿಗಳನ್ನೂ ಬಲಪಡಿಸುವಲ್ಲಿ ಸರ್ಕಾರ ಅಗತ್ಯಕ್ರಮ ವಹಿಸಿ ವಿವಿಗಳ ಘನತೆಯನ್ನು ಕಾಪಾಡಿಕೊಳ್ಳುವುದು ಔಚಿತ್ಯಪೂರ್ಣ. -ಡಾ. ಡಿ. ಶ್ರೀನಿವಾಸ ಮಣಗಳ್ಳಿ, ಸಹಾಯಕ ಪ್ರಾಧ್ಯಾಪಕರು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿ.

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

3 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

3 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

3 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

6 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

6 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

6 hours ago