ಓದುಗರ ಪತ್ರ
ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮದಲ್ಲಿ ಮನರಂಜನೆಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಅತಿಥಿಯೂ ೩೦ ನಿಮಿಷಗಳಿಗಿಂತಲೂ ಹೆಚ್ಚು ಕಾಲ ಭಾಷಣ ಮಾಡಿದ್ದರಿಂದ ರಸಮಂಜರಿ ಕಾರ್ಯಕ್ರಮ ವಿಳಂಬವಾಗಿ ಶುರುವಾಯಿತು. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಹಳೆಯ ಹಾಡುಗಳನ್ನು ಆಸ್ವಾದಿಸಲು ಬಂದಿದ್ದರು. ಆದರೆ ಮುಖ್ಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮವೇ ಹೆಚ್ಚು ಸಮಯ ನಡೆದಿದ್ದರಿಂದ ಪ್ರೇಕ್ಷಕರು ಬೇಸರಗೊಂಡರು.
ಸಂಜೆ ೫. ೩೦ಕ್ಕೆ ಆರಂಭವಾಗಬೇಕಿದ್ದ ರಸಮಂಜರಿ ವೇದಿಕೆ ಕಾರ್ಯಕ್ರಮದಿಂದಾಗಿ ಸಂಜೆ ೭. ೦೦ ಗಂಟೆಗೆ ಪ್ರಾರಂಭವಾಯಿತು. ಅಷ್ಟರಲ್ಲಾಗಲೇ ಚಿತ್ರಗೀತೆಗಳನ್ನು ಆಲಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಬಹುಪಾಲು ಮಂದಿ ಮನೆಗಳಿಗೆ ತೆರಳಿದ್ದರು.
ಮುಂದಾದರೂ ಕಾರ್ಯಕ್ರಮ ಆಯೋಜಕರು ಸಮಯದ ಪರಿವೆಯೊಂದಿಗೆ, ಪ್ರೇಕ್ಷಕರ ಮನಸ್ಥಿತಿಯನ್ನೂ ಅರ್ಥ ಮಾಡಿಕೊಂಡು ವೇದಿಕೆ ಕಾರ್ಯಕ್ರಮಗಳಿಗೆ ಕಡಿಮೆ ಸಮಯವನ್ನು ಮೀಸಲಿಟ್ಟು, ಕಾರ್ಯಕ್ರಮ ಆಯೋಜಿಸಲಿ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…