ಓದುಗರ ಪತ್ರ

ಓದುಗರ ಪತ್ರ | ವೇದಿಕೆ ಕಾರ್ಯಕ್ರಮಗಳನ್ನು ಕಡಿಮೆ ಮಾಡಿ

ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮದಲ್ಲಿ ಮನರಂಜನೆಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಅತಿಥಿಯೂ ೩೦ ನಿಮಿಷಗಳಿಗಿಂತಲೂ ಹೆಚ್ಚು ಕಾಲ ಭಾಷಣ ಮಾಡಿದ್ದರಿಂದ ರಸಮಂಜರಿ ಕಾರ್ಯಕ್ರಮ ವಿಳಂಬವಾಗಿ ಶುರುವಾಯಿತು. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಹಳೆಯ ಹಾಡುಗಳನ್ನು ಆಸ್ವಾದಿಸಲು ಬಂದಿದ್ದರು. ಆದರೆ ಮುಖ್ಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮವೇ ಹೆಚ್ಚು ಸಮಯ ನಡೆದಿದ್ದರಿಂದ ಪ್ರೇಕ್ಷಕರು ಬೇಸರಗೊಂಡರು.

ಸಂಜೆ ೫. ೩೦ಕ್ಕೆ ಆರಂಭವಾಗಬೇಕಿದ್ದ ರಸಮಂಜರಿ ವೇದಿಕೆ ಕಾರ್ಯಕ್ರಮದಿಂದಾಗಿ ಸಂಜೆ ೭. ೦೦ ಗಂಟೆಗೆ ಪ್ರಾರಂಭವಾಯಿತು. ಅಷ್ಟರಲ್ಲಾಗಲೇ ಚಿತ್ರಗೀತೆಗಳನ್ನು ಆಲಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಬಹುಪಾಲು ಮಂದಿ ಮನೆಗಳಿಗೆ ತೆರಳಿದ್ದರು.

ಮುಂದಾದರೂ ಕಾರ್ಯಕ್ರಮ ಆಯೋಜಕರು ಸಮಯದ ಪರಿವೆಯೊಂದಿಗೆ, ಪ್ರೇಕ್ಷಕರ ಮನಸ್ಥಿತಿಯನ್ನೂ ಅರ್ಥ ಮಾಡಿಕೊಂಡು ವೇದಿಕೆ ಕಾರ್ಯಕ್ರಮಗಳಿಗೆ ಕಡಿಮೆ ಸಮಯವನ್ನು ಮೀಸಲಿಟ್ಟು, ಕಾರ್ಯಕ್ರಮ ಆಯೋಜಿಸಲಿ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago