ಓದುಗರ ಪತ್ರ

ಓದುಗರ ಪತ್ರ | ವೇದಿಕೆ ಕಾರ್ಯಕ್ರಮಗಳನ್ನು ಕಡಿಮೆ ಮಾಡಿ

ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮದಲ್ಲಿ ಮನರಂಜನೆಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಅತಿಥಿಯೂ ೩೦ ನಿಮಿಷಗಳಿಗಿಂತಲೂ ಹೆಚ್ಚು ಕಾಲ ಭಾಷಣ ಮಾಡಿದ್ದರಿಂದ ರಸಮಂಜರಿ ಕಾರ್ಯಕ್ರಮ ವಿಳಂಬವಾಗಿ ಶುರುವಾಯಿತು. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಹಳೆಯ ಹಾಡುಗಳನ್ನು ಆಸ್ವಾದಿಸಲು ಬಂದಿದ್ದರು. ಆದರೆ ಮುಖ್ಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮವೇ ಹೆಚ್ಚು ಸಮಯ ನಡೆದಿದ್ದರಿಂದ ಪ್ರೇಕ್ಷಕರು ಬೇಸರಗೊಂಡರು.

ಸಂಜೆ ೫. ೩೦ಕ್ಕೆ ಆರಂಭವಾಗಬೇಕಿದ್ದ ರಸಮಂಜರಿ ವೇದಿಕೆ ಕಾರ್ಯಕ್ರಮದಿಂದಾಗಿ ಸಂಜೆ ೭. ೦೦ ಗಂಟೆಗೆ ಪ್ರಾರಂಭವಾಯಿತು. ಅಷ್ಟರಲ್ಲಾಗಲೇ ಚಿತ್ರಗೀತೆಗಳನ್ನು ಆಲಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಬಹುಪಾಲು ಮಂದಿ ಮನೆಗಳಿಗೆ ತೆರಳಿದ್ದರು.

ಮುಂದಾದರೂ ಕಾರ್ಯಕ್ರಮ ಆಯೋಜಕರು ಸಮಯದ ಪರಿವೆಯೊಂದಿಗೆ, ಪ್ರೇಕ್ಷಕರ ಮನಸ್ಥಿತಿಯನ್ನೂ ಅರ್ಥ ಮಾಡಿಕೊಂಡು ವೇದಿಕೆ ಕಾರ್ಯಕ್ರಮಗಳಿಗೆ ಕಡಿಮೆ ಸಮಯವನ್ನು ಮೀಸಲಿಟ್ಟು, ಕಾರ್ಯಕ್ರಮ ಆಯೋಜಿಸಲಿ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

6 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

10 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

10 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

10 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

10 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

11 hours ago