ಓದುಗರ ಪತ್ರ
ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮದಲ್ಲಿ ಮನರಂಜನೆಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಅತಿಥಿಯೂ ೩೦ ನಿಮಿಷಗಳಿಗಿಂತಲೂ ಹೆಚ್ಚು ಕಾಲ ಭಾಷಣ ಮಾಡಿದ್ದರಿಂದ ರಸಮಂಜರಿ ಕಾರ್ಯಕ್ರಮ ವಿಳಂಬವಾಗಿ ಶುರುವಾಯಿತು. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಹಳೆಯ ಹಾಡುಗಳನ್ನು ಆಸ್ವಾದಿಸಲು ಬಂದಿದ್ದರು. ಆದರೆ ಮುಖ್ಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮವೇ ಹೆಚ್ಚು ಸಮಯ ನಡೆದಿದ್ದರಿಂದ ಪ್ರೇಕ್ಷಕರು ಬೇಸರಗೊಂಡರು.
ಸಂಜೆ ೫. ೩೦ಕ್ಕೆ ಆರಂಭವಾಗಬೇಕಿದ್ದ ರಸಮಂಜರಿ ವೇದಿಕೆ ಕಾರ್ಯಕ್ರಮದಿಂದಾಗಿ ಸಂಜೆ ೭. ೦೦ ಗಂಟೆಗೆ ಪ್ರಾರಂಭವಾಯಿತು. ಅಷ್ಟರಲ್ಲಾಗಲೇ ಚಿತ್ರಗೀತೆಗಳನ್ನು ಆಲಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಬಹುಪಾಲು ಮಂದಿ ಮನೆಗಳಿಗೆ ತೆರಳಿದ್ದರು.
ಮುಂದಾದರೂ ಕಾರ್ಯಕ್ರಮ ಆಯೋಜಕರು ಸಮಯದ ಪರಿವೆಯೊಂದಿಗೆ, ಪ್ರೇಕ್ಷಕರ ಮನಸ್ಥಿತಿಯನ್ನೂ ಅರ್ಥ ಮಾಡಿಕೊಂಡು ವೇದಿಕೆ ಕಾರ್ಯಕ್ರಮಗಳಿಗೆ ಕಡಿಮೆ ಸಮಯವನ್ನು ಮೀಸಲಿಟ್ಟು, ಕಾರ್ಯಕ್ರಮ ಆಯೋಜಿಸಲಿ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…