ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.
ಗಲಭೆಗಳು ಸೃಷ್ಟಿಯಾಗಲು ದೊಡ್ಡ ದೊಡ್ಡ ಕಾರಣಗಳೇ ಬೇಕು ಎಂದೇನಿಲ್ಲ. ಕೆಲವೊಮ್ಮೆ ಸಣ್ಣಪುಟ್ಟ ಗಲಾಟೆಗಳೂ ದೊಡ್ಡ ಪ್ರಮಾಣದಲ್ಲಿ ಕಿಡಿಹೊತ್ತಿಸ ಬಹುದು. ಅಂತಹದರಲ್ಲಿ ಉದಯಗಿರಿಯಲ್ಲಿ ಸಂಭವಿಸಿದ ಗಲಭೆ ವೇಳೆ ಉದ್ರಿಕ್ತರನ್ನು ಪೊಲೀಸರು ನಿಯಂತ್ರಿಸಿ ಗಲಭೆಯನ್ನು ಕೆಲವೇ ಗಂಟೆಯಲ್ಲಿ ತಣ್ಣಗಾಗಿಸಿದ್ದಾರೆ.
ಉದಯಗಿರಿ ಸೂಕ್ಷ ಪ್ರದೇಶವಾಗಿದ್ದು, ಇಲ್ಲಿ ಗಲಭೆಗಳಿಗೆ ದೊಡ್ಡ ಕಾರಣಗಳೇ ಬೇಕಿಲ್ಲ ಎಂಬುದು ವಾಸ್ತವ. ಇಂತಹ ಸ್ಥಳದಲ್ಲಿ ಸಿಬ್ಬಂದಿ ಕಾನೂನಾತ್ಮಕವಾಗಿ ಹಾಗೂ ಭಾವನಾತ್ಮಕವಾಗಿ ಎಲ್ಲರಿಗೂ ಸ್ಪಂದಿಸುತ್ತಾ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಸಂಭವಿಸಬೇಕಾದ ಅದೆಷ್ಟೋ ಗಲಾಟೆಗಳನ್ನು ನಿಯಂತ್ರಿಸಿದ್ದಾರೆ. ಹಲವು ಪ್ರಕರಣಗಳನ್ನು ಸೂಕ್ಷ ವಾಗಿ ಅವಲೋಕಿಸಿ ಸಂಧಾನ ಮಾಡಿಸಿ ಶಾಂತಿ ಸುವ್ಯವಸ್ಥೆ ಕಾಪಾಡುತ್ತಾ ಬಂದಿದ್ದಾರೆ. ಅಚಾನಕ್ಕಾಗಿ ಒಮ್ಮೆ ಗಲಭೆಯಾದ ಮಾತ್ರಕ್ಕೆ ‘ಪೊಲೀಸರಿಗೆ ಕಾಮನ್ ಸೆನ್ಸ್ ಇಲ್ಲ’ ಎಂದು ಹೇಳುವುದು ಎಷ್ಟು ಸರಿ? ಕೆಲ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಎಲ್ಲರನ್ನೂ ದೂರುವುದು ಸರಿಯಲ್ಲ. ಉದಯಗಿರಿಯಲ್ಲಿ ಎಲ್ಲ ಸಮುದಾಯದವರೊಂದಿಗೆ ಸೌಜನ್ಯದಿಂದಿರುವ ಹಲವು ಕುಟುಂಬಗಳೂ ಇವೆ. ಇಂತಹ ಸೂಕ್ಷ ತೆಯನ್ನು ಅರಿತು ಕೆಲಸ ಮಾಡುವ ಪೊಲೀಸರಿಗೆ ಸಚಿವರೊಬ್ಬರು ಕಾಮನ್ ಸೆನ್ಸ್ (ಸಾಮಾನ್ಯ ಜ್ಞಾನ) ಇಲ್ಲ ಎಂದಿರುವುದು ಎಷ್ಟು ಸರಿ? -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…