ಓದುಗರ ಪತ್ರ

ಓದುಗರ ಪತ್ರ | ಸಚಿವರ ಹೇಳಿಕೆ ಖಂಡನೀಯ

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್‌ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್‌ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.

ಗಲಭೆಗಳು ಸೃಷ್ಟಿಯಾಗಲು ದೊಡ್ಡ ದೊಡ್ಡ ಕಾರಣಗಳೇ ಬೇಕು ಎಂದೇನಿಲ್ಲ. ಕೆಲವೊಮ್ಮೆ ಸಣ್ಣಪುಟ್ಟ ಗಲಾಟೆಗಳೂ ದೊಡ್ಡ ಪ್ರಮಾಣದಲ್ಲಿ ಕಿಡಿಹೊತ್ತಿಸ ಬಹುದು. ಅಂತಹದರಲ್ಲಿ ಉದಯಗಿರಿಯಲ್ಲಿ ಸಂಭವಿಸಿದ ಗಲಭೆ ವೇಳೆ ಉದ್ರಿಕ್ತರನ್ನು ಪೊಲೀಸರು ನಿಯಂತ್ರಿಸಿ ಗಲಭೆಯನ್ನು ಕೆಲವೇ ಗಂಟೆಯಲ್ಲಿ ತಣ್ಣಗಾಗಿಸಿದ್ದಾರೆ.

ಉದಯಗಿರಿ ಸೂಕ್ಷ ಪ್ರದೇಶವಾಗಿದ್ದು, ಇಲ್ಲಿ ಗಲಭೆಗಳಿಗೆ ದೊಡ್ಡ ಕಾರಣಗಳೇ ಬೇಕಿಲ್ಲ ಎಂಬುದು ವಾಸ್ತವ. ಇಂತಹ ಸ್ಥಳದಲ್ಲಿ ಸಿಬ್ಬಂದಿ ಕಾನೂನಾತ್ಮಕವಾಗಿ ಹಾಗೂ ಭಾವನಾತ್ಮಕವಾಗಿ ಎಲ್ಲರಿಗೂ ಸ್ಪಂದಿಸುತ್ತಾ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಸಂಭವಿಸಬೇಕಾದ ಅದೆಷ್ಟೋ ಗಲಾಟೆಗಳನ್ನು ನಿಯಂತ್ರಿಸಿದ್ದಾರೆ. ಹಲವು ಪ್ರಕರಣಗಳನ್ನು ಸೂಕ್ಷ ವಾಗಿ ಅವಲೋಕಿಸಿ ಸಂಧಾನ ಮಾಡಿಸಿ ಶಾಂತಿ ಸುವ್ಯವಸ್ಥೆ ಕಾಪಾಡುತ್ತಾ ಬಂದಿದ್ದಾರೆ. ಅಚಾನಕ್ಕಾಗಿ ಒಮ್ಮೆ ಗಲಭೆಯಾದ ಮಾತ್ರಕ್ಕೆ ‘ಪೊಲೀಸರಿಗೆ ಕಾಮನ್ ಸೆನ್ಸ್ ಇಲ್ಲ’ ಎಂದು ಹೇಳುವುದು ಎಷ್ಟು ಸರಿ? ಕೆಲ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಎಲ್ಲರನ್ನೂ ದೂರುವುದು ಸರಿಯಲ್ಲ. ಉದಯಗಿರಿಯಲ್ಲಿ ಎಲ್ಲ ಸಮುದಾಯದವರೊಂದಿಗೆ ಸೌಜನ್ಯದಿಂದಿರುವ ಹಲವು ಕುಟುಂಬಗಳೂ ಇವೆ. ಇಂತಹ ಸೂಕ್ಷ ತೆಯನ್ನು ಅರಿತು ಕೆಲಸ ಮಾಡುವ ಪೊಲೀಸರಿಗೆ ಸಚಿವರೊಬ್ಬರು ಕಾಮನ್ ಸೆನ್ಸ್ (ಸಾಮಾನ್ಯ ಜ್ಞಾನ) ಇಲ್ಲ ಎಂದಿರುವುದು ಎಷ್ಟು ಸರಿ? -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

8 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

8 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

8 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

8 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

9 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

9 hours ago