ಓದುಗರ ಪತ್ರ

ಓದುಗರ ಪತ್ರ| ಕೆಸರು ಗದ್ದೆಯಂತಾದ ರಸ್ತೆಗಳು

ಎಚ್.ಡಿ.ಕೋಟೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಮನೆಗಳಿಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಲಾಗು ತ್ತಿದೆ. ಈ ಪೈಪ್‌ಲೈನ್ ಅಳವಡಿಸುವ ಸಲುವಾಗಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲ ರಸ್ತೆಗಳ ಎರಡೂ ಅಂಚುಗಳನ್ನು ಅಗೆಯಲಾಗಿದೆ. ಹೀಗೆ ಅಗೆದ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಲಾಗಿದ್ದು, ಮೇಲೆ ಸಿಮೆಂಟ್ ಅಥವಾ ಡಾಂಬರು ಹಾಕದ
ಪರಿಣಾಮ ರಸ್ತೆಗಳು ಕೆಸರುಮಯವಾಗಿವೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳು ಸಂಪೂರ್ಣ ಕೆಸರಿನ ಗದ್ದೆಗಳಂತಾಗಿದ್ದು, ಪಾದಚಾರಿಗಳಿಗೆ ಜಾರಿ ಬೀಳುವ ಅಪಾಯ ಎದುರಾಗಿದೆ. ಅಲ್ಲದೆ ಅಲ್ಲಲ್ಲಿ ಗುಂಡಿಗಳೂ ನಿರ್ಮಾಣವಾಗಿವೆ.

ಇನ್ನು ಕೆಲ ಭಾಗಗಳಲ್ಲಿ ಅಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದಾಗಿ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ಗುಂಡಿ ಕಾಣದೆ ವಾಹನ ಸವಾರರು ಬಿದಿರುವ ಉದಾಹರಣೆಗಳಿವೆ.

ಸದ್ಯ ಅಂತರಸಂತೆ ಗ್ರಾಮದಲ್ಲಿಯೂ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದ ಎಲ್ಲ ರಸ್ತೆಗಳನ್ನೂ ಅಗೆದು ಹಾಕಲಾಗಿದೆ. ಮಾರ್ಚ್‌ನಲ್ಲಿಯೇ ಆರಂಭವಾದ ಈ ಜೆಜೆಎಂ ಕಾಮಗಾರಿ ಇನ್ನೂ ಮುಗಿಯದ ಕಾರಣ ಗ್ರಾಮಗಳ ರಸ್ತೆಗಳಲ್ಲಿ ವಾಹನಗಳು ಸಂಚರಿಸಲು ಹರಸಾಹಸ ಪಡಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಆದಷ್ಟು ಬೇಗ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಅಗೆದ ರಸ್ತೆಗಳಿಗೆ ಡಾಂಬರು ಅಥವಾ ಸಿಮೆಂಟ್ ಹಾಕಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

3 mins ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

25 mins ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

35 mins ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

44 mins ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

1 hour ago

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

2 hours ago