ಓದುಗರ ಪತ್ರ

ಓದುಗರ ಪತ್ರ| ಕೆಸರು ಗದ್ದೆಯಂತಾದ ರಸ್ತೆಗಳು

ಎಚ್.ಡಿ.ಕೋಟೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಮನೆಗಳಿಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಲಾಗು ತ್ತಿದೆ. ಈ ಪೈಪ್‌ಲೈನ್ ಅಳವಡಿಸುವ ಸಲುವಾಗಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲ ರಸ್ತೆಗಳ ಎರಡೂ ಅಂಚುಗಳನ್ನು ಅಗೆಯಲಾಗಿದೆ. ಹೀಗೆ ಅಗೆದ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಲಾಗಿದ್ದು, ಮೇಲೆ ಸಿಮೆಂಟ್ ಅಥವಾ ಡಾಂಬರು ಹಾಕದ
ಪರಿಣಾಮ ರಸ್ತೆಗಳು ಕೆಸರುಮಯವಾಗಿವೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳು ಸಂಪೂರ್ಣ ಕೆಸರಿನ ಗದ್ದೆಗಳಂತಾಗಿದ್ದು, ಪಾದಚಾರಿಗಳಿಗೆ ಜಾರಿ ಬೀಳುವ ಅಪಾಯ ಎದುರಾಗಿದೆ. ಅಲ್ಲದೆ ಅಲ್ಲಲ್ಲಿ ಗುಂಡಿಗಳೂ ನಿರ್ಮಾಣವಾಗಿವೆ.

ಇನ್ನು ಕೆಲ ಭಾಗಗಳಲ್ಲಿ ಅಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದಾಗಿ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ಗುಂಡಿ ಕಾಣದೆ ವಾಹನ ಸವಾರರು ಬಿದಿರುವ ಉದಾಹರಣೆಗಳಿವೆ.

ಸದ್ಯ ಅಂತರಸಂತೆ ಗ್ರಾಮದಲ್ಲಿಯೂ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದ ಎಲ್ಲ ರಸ್ತೆಗಳನ್ನೂ ಅಗೆದು ಹಾಕಲಾಗಿದೆ. ಮಾರ್ಚ್‌ನಲ್ಲಿಯೇ ಆರಂಭವಾದ ಈ ಜೆಜೆಎಂ ಕಾಮಗಾರಿ ಇನ್ನೂ ಮುಗಿಯದ ಕಾರಣ ಗ್ರಾಮಗಳ ರಸ್ತೆಗಳಲ್ಲಿ ವಾಹನಗಳು ಸಂಚರಿಸಲು ಹರಸಾಹಸ ಪಡಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಆದಷ್ಟು ಬೇಗ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಅಗೆದ ರಸ್ತೆಗಳಿಗೆ ಡಾಂಬರು ಅಥವಾ ಸಿಮೆಂಟ್ ಹಾಕಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

2 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

2 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

2 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

4 hours ago