ಓದುಗರ ಪತ್ರ

ಓದುಗರ ಪತ್ರ| ಕೆಸರು ಗದ್ದೆಯಂತಾದ ರಸ್ತೆಗಳು

ಎಚ್.ಡಿ.ಕೋಟೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಮನೆಗಳಿಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಲಾಗು ತ್ತಿದೆ. ಈ ಪೈಪ್‌ಲೈನ್ ಅಳವಡಿಸುವ ಸಲುವಾಗಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲ ರಸ್ತೆಗಳ ಎರಡೂ ಅಂಚುಗಳನ್ನು ಅಗೆಯಲಾಗಿದೆ. ಹೀಗೆ ಅಗೆದ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಲಾಗಿದ್ದು, ಮೇಲೆ ಸಿಮೆಂಟ್ ಅಥವಾ ಡಾಂಬರು ಹಾಕದ
ಪರಿಣಾಮ ರಸ್ತೆಗಳು ಕೆಸರುಮಯವಾಗಿವೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳು ಸಂಪೂರ್ಣ ಕೆಸರಿನ ಗದ್ದೆಗಳಂತಾಗಿದ್ದು, ಪಾದಚಾರಿಗಳಿಗೆ ಜಾರಿ ಬೀಳುವ ಅಪಾಯ ಎದುರಾಗಿದೆ. ಅಲ್ಲದೆ ಅಲ್ಲಲ್ಲಿ ಗುಂಡಿಗಳೂ ನಿರ್ಮಾಣವಾಗಿವೆ.

ಇನ್ನು ಕೆಲ ಭಾಗಗಳಲ್ಲಿ ಅಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದಾಗಿ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ಗುಂಡಿ ಕಾಣದೆ ವಾಹನ ಸವಾರರು ಬಿದಿರುವ ಉದಾಹರಣೆಗಳಿವೆ.

ಸದ್ಯ ಅಂತರಸಂತೆ ಗ್ರಾಮದಲ್ಲಿಯೂ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದ ಎಲ್ಲ ರಸ್ತೆಗಳನ್ನೂ ಅಗೆದು ಹಾಕಲಾಗಿದೆ. ಮಾರ್ಚ್‌ನಲ್ಲಿಯೇ ಆರಂಭವಾದ ಈ ಜೆಜೆಎಂ ಕಾಮಗಾರಿ ಇನ್ನೂ ಮುಗಿಯದ ಕಾರಣ ಗ್ರಾಮಗಳ ರಸ್ತೆಗಳಲ್ಲಿ ವಾಹನಗಳು ಸಂಚರಿಸಲು ಹರಸಾಹಸ ಪಡಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಆದಷ್ಟು ಬೇಗ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಅಗೆದ ರಸ್ತೆಗಳಿಗೆ ಡಾಂಬರು ಅಥವಾ ಸಿಮೆಂಟ್ ಹಾಕಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago