ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ’ ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ ಬಗ್ಗೆ ವರದಿ ಮಾಡಲಾಗಿತ್ತು. ಇಷ್ಟಿದ್ದರೂ ನಾಡಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ನಾಡಕಚೇರಿ ಸಂಪೂರ್ಣ ಶಿಥಿಲಗೊಂಡಿದ್ದು, ಮಳೆ ನೀರು ಸೋರುತ್ತಿದೆ. ಕಟ್ಟಡದ ಮೇಲ್ಲಾವಣಿಯ ಚಕ್ಕೆಗಳು ಬೀಳುತ್ತಿದ್ದು, ಕಟ್ಟಡವೇ ಕುಸಿದುಬೀಳುವ ಆತಂಕ ಸೃಷ್ಟಿಯಾಗಿದೆ.
ಈಗ ಮಳೆಗಾಲವಾದ್ದರಿಂದ ಕಟ್ಟಡ ಪೂರ್ತಿ ಸೋರುತ್ತಿದ್ದು, ಕಟ್ಟಡದೊಳಗೆ ನಿಂತ ನೀರಿನಲ್ಲಿ
ಇಲ್ಲಿನ ಸಿಬ್ಬಂದಿ ಜೀವ ಕೈಯಲ್ಲಿ ಹಿಡಿದುಕೊಂಡು ಕೆಲಸ ಮಾಡಬೇಕಾಗಿದೆ. ಇದರ ವ್ಯಾಪ್ತಿಯ ಹಳ್ಳಿಗಳ ಅನೇಕ ಜನರ ದಾಖಲೆಗಳು ಇದೇ ನಾಡಕಚೇರಿಯಲ್ಲಿವೆ. ಒಂದು ವೇಳೆ ಕಟ್ಟಡ ಕುಸಿದು ಬಿದ್ದರೆ ಅಥವಾ ಮಳೆ ನೀರು ತುಂಬಿದರೆ ಈ ದಾಖಲೆಗಳೆಲ್ಲ ನಾಶವಾಗುವ ಆತಂಕವಿದೆ. ಇನ್ನು ಪ್ರತಿನಿತ್ಯ ಈ ನಾಡಕಚೇರಿಗೆ ಅನೇಕ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ಬಂದುಹೋಗುತ್ತಾರೆ. ಈ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಆದ್ದರಿಂದ ಸಂಬಂಧಪಟ್ಟವರು ಕೂಡಲೆ ಎಚ್ಚೆತ್ತುಕೊಂಡು ನಾಡಕಚೇರಿಯನ್ನು ಸ್ಥಳಾಂತರ ಮಾಡಬೇಕಿದೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…