ಓದುಗರ ಪತ್ರ

ಓದುಗರ ಪತ್ರ | ಕುಸಿದು ಬೀಳುವ ಸ್ಥಿತಿಯಲ್ಲಿ ನಾಡಕಚೇರಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ’ ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ ಬಗ್ಗೆ ವರದಿ ಮಾಡಲಾಗಿತ್ತು. ಇಷ್ಟಿದ್ದರೂ ನಾಡಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ನಾಡಕಚೇರಿ ಸಂಪೂರ್ಣ ಶಿಥಿಲಗೊಂಡಿದ್ದು, ಮಳೆ ನೀರು ಸೋರುತ್ತಿದೆ. ಕಟ್ಟಡದ ಮೇಲ್ಲಾವಣಿಯ ಚಕ್ಕೆಗಳು ಬೀಳುತ್ತಿದ್ದು, ಕಟ್ಟಡವೇ ಕುಸಿದುಬೀಳುವ ಆತಂಕ ಸೃಷ್ಟಿಯಾಗಿದೆ.

ಈಗ ಮಳೆಗಾಲವಾದ್ದರಿಂದ ಕಟ್ಟಡ ಪೂರ್ತಿ ಸೋರುತ್ತಿದ್ದು, ಕಟ್ಟಡದೊಳಗೆ ನಿಂತ ನೀರಿನಲ್ಲಿ
ಇಲ್ಲಿನ ಸಿಬ್ಬಂದಿ ಜೀವ ಕೈಯಲ್ಲಿ ಹಿಡಿದುಕೊಂಡು ಕೆಲಸ ಮಾಡಬೇಕಾಗಿದೆ. ಇದರ ವ್ಯಾಪ್ತಿಯ ಹಳ್ಳಿಗಳ ಅನೇಕ ಜನರ ದಾಖಲೆಗಳು ಇದೇ ನಾಡಕಚೇರಿಯಲ್ಲಿವೆ. ಒಂದು ವೇಳೆ ಕಟ್ಟಡ ಕುಸಿದು ಬಿದ್ದರೆ ಅಥವಾ ಮಳೆ ನೀರು ತುಂಬಿದರೆ ಈ ದಾಖಲೆಗಳೆಲ್ಲ ನಾಶವಾಗುವ ಆತಂಕವಿದೆ. ಇನ್ನು ಪ್ರತಿನಿತ್ಯ ಈ ನಾಡಕಚೇರಿಗೆ ಅನೇಕ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ಬಂದುಹೋಗುತ್ತಾರೆ. ಈ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಆದ್ದರಿಂದ ಸಂಬಂಧಪಟ್ಟವರು ಕೂಡಲೆ ಎಚ್ಚೆತ್ತುಕೊಂಡು ನಾಡಕಚೇರಿಯನ್ನು ಸ್ಥಳಾಂತರ ಮಾಡಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್‌.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago