ಓದುಗರ ಪತ್ರ

ಓದಗರ ಪತ್ರ: ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ.

ಎಸ್. ಎಂ. ಕೃಷ್ಣರವರು ಅಮೆರಿಕದಲ್ಲಿ ಕಾನೂನು ವಿಷಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿಯೇ ಅಂದಿನ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪಽಸಿದ್ದ ಜಾನ್ ಎಫ್. ಕೆನಡಿ ಪರವಾಗಿ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಕಾರಣರಾಗಿದ್ದರು. ನಂತರ ಭಾರತಕ್ಕೆ ಮರಳಿದ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅನೇಕ ಮಹತ್ವದ ಖಾತೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದರು.

ಸುಮಾರು ೬೦ ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್, ವಿಧಾನಸಭಾ ಸ್ಪೀಕರ್ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ಕೈಗಾರಿಕಾ , ವಿದೇಶಾಂಗ ಸಚಿವರಾಗಿ, ಕರ್ನಾಟಕದ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಐಟಿ ಬಿಟಿ ಕಂಪೆನಿಗಳನ್ನು ಪರಿಚಯಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ. ಇಂದು ಬೆಂಗಳೂರು ಮಹಾನಗರವಾಗಿ ಬೆಳವಣಿಗೆಯಾಗಿದೆ ಎಂದರೆ ಇವರ ಕೊಡುಗೆ ಅಪಾರ. ಇಂತಹ ಅಪರೂಪದ ರಾಜಕಾರಣಿಯ ಹೆಸರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಇಡುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮನೆ ನೆಲಸಮ ಪ್ರಕರಣ: 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲಾ ಹೊರಗಿನವರು

ಬೆಂಗಳೂರು: ಭಾರಿ ವಿವಾದ ಹುಟ್ಟಿಸಿದ್ದ ಕೋಗಿಲು ಲೇಔಟ್‍ನ ಮನೆ ನೆಲಸಮ ಪ್ರಕರಣದಲ್ಲಿ 37 ಕುಟುಂಬಗಳು ಮಾತ್ರ ಸ್ಥಳೀಯರು ಎಂದು ಅಧಿಕಾರಿಗಳ…

7 mins ago

ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ…

20 mins ago

ಸಿಎಂ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ. ನಗರದಲ್ಲಿಂದು…

28 mins ago

ಪ್ರವಾಸಿಗರಿಗೆ ಗುಡ್‌ನ್ಯೂಸ್:‌ ತಾಜ್‌ ಮಹಲ್‌ ವೀಕ್ಷಣೆಗೆ ಜನವರಿ.15ರಿಂದ 3 ದಿನ ಉಚಿತ ಪ್ರವೇಶ

ಉತ್ತರ ಪ್ರದೇಶ: ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ ವೀಕ್ಷಣೆಗೆ ಜನವರಿ.15ರಿಂದ ಮೂರು ದಿನಗಳ ಕಾಲ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಪ್ರವಾಸಿಗರು…

36 mins ago

ಬೆಂಗಳೂರಿನಲ್ಲಿ 3.16 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ಇಬ್ಬರು ಆರೋಪಿಗಳು ಅರೆಸ್ಟ್‌

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬರೋಬ್ಬರಿ 3.16 ಕೋಟಿ ರೂ ಟ್ರಗ್ಸ್‌ ಜಪ್ತಿ ಮಾಡಿಕೊಂಡಿದ್ದಾರೆ. ಮಾಲು ಸಮೇತ…

48 mins ago

ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ: ಕಾರಣ ಇಷ್ಟೇ.!

ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಡಿಎಂಕೆ…

2 hours ago