ಓದುಗರ ಪತ್ರ

ಓದಗರ ಪತ್ರ: ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ.

ಎಸ್. ಎಂ. ಕೃಷ್ಣರವರು ಅಮೆರಿಕದಲ್ಲಿ ಕಾನೂನು ವಿಷಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿಯೇ ಅಂದಿನ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪಽಸಿದ್ದ ಜಾನ್ ಎಫ್. ಕೆನಡಿ ಪರವಾಗಿ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಕಾರಣರಾಗಿದ್ದರು. ನಂತರ ಭಾರತಕ್ಕೆ ಮರಳಿದ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅನೇಕ ಮಹತ್ವದ ಖಾತೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದರು.

ಸುಮಾರು ೬೦ ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್, ವಿಧಾನಸಭಾ ಸ್ಪೀಕರ್ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ಕೈಗಾರಿಕಾ , ವಿದೇಶಾಂಗ ಸಚಿವರಾಗಿ, ಕರ್ನಾಟಕದ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಐಟಿ ಬಿಟಿ ಕಂಪೆನಿಗಳನ್ನು ಪರಿಚಯಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ. ಇಂದು ಬೆಂಗಳೂರು ಮಹಾನಗರವಾಗಿ ಬೆಳವಣಿಗೆಯಾಗಿದೆ ಎಂದರೆ ಇವರ ಕೊಡುಗೆ ಅಪಾರ. ಇಂತಹ ಅಪರೂಪದ ರಾಜಕಾರಣಿಯ ಹೆಸರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಇಡುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

2 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

2 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

4 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

4 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

4 hours ago