ಓದುಗರ ಪತ್ರ

ಓದಗರ ಪತ್ರ: ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ.

ಎಸ್. ಎಂ. ಕೃಷ್ಣರವರು ಅಮೆರಿಕದಲ್ಲಿ ಕಾನೂನು ವಿಷಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿಯೇ ಅಂದಿನ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪಽಸಿದ್ದ ಜಾನ್ ಎಫ್. ಕೆನಡಿ ಪರವಾಗಿ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಕಾರಣರಾಗಿದ್ದರು. ನಂತರ ಭಾರತಕ್ಕೆ ಮರಳಿದ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅನೇಕ ಮಹತ್ವದ ಖಾತೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದರು.

ಸುಮಾರು ೬೦ ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್, ವಿಧಾನಸಭಾ ಸ್ಪೀಕರ್ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ಕೈಗಾರಿಕಾ , ವಿದೇಶಾಂಗ ಸಚಿವರಾಗಿ, ಕರ್ನಾಟಕದ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಐಟಿ ಬಿಟಿ ಕಂಪೆನಿಗಳನ್ನು ಪರಿಚಯಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ. ಇಂದು ಬೆಂಗಳೂರು ಮಹಾನಗರವಾಗಿ ಬೆಳವಣಿಗೆಯಾಗಿದೆ ಎಂದರೆ ಇವರ ಕೊಡುಗೆ ಅಪಾರ. ಇಂತಹ ಅಪರೂಪದ ರಾಜಕಾರಣಿಯ ಹೆಸರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಇಡುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago