ಓದುಗರ ಪತ್ರ

ಓದುಗರ ಪತ್ರ | ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ

ಮೈಸೂರಿನ ಕೆಆರ್‌ಎಸ್ ರಸ್ತೆ ಅಥವಾ ಪ್ರಿನ್ಸೆಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ‘ ಎಂದು ನಾಮಕರಣ ಮಾಡಲು ಮುಂದಾಗಿರುವುದು ಸೂಕ್ತವಲ್ಲ ಅನಿಸುತ್ತದೆ.

ಮೊದಲನೆಯದಾಗಿ ಜೀವಂತವಿರುವ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡುವುದು ಸ್ವಲ್ಪವೂ ಸರಿ ಇಲ್ಲ. ಈ ಬಲವಂತದ ನಾಮಕರಣದ ಬಗ್ಗೆ ಜನ ಏನೇ ಹೇಳಿದರೂ ಇದು ಅರಸೊತ್ತಿಗೆಯ ಬಗ್ಗೆ ಅದಮ್ಯ ಪ್ರೀತಿ, ಗೌರವವಿರುವ ಮೈಸೂರಿಗರಿಗೆ ಬಗೆಯುವ ದ್ರೋಹ ಎಂದೇ ಹೇಳಬೇಕಾಗುತ್ತದೆ. ಡಿವಿಜಿಯವರ ಕುರಿತಾದ ಪ್ರಸಂಗವೊಂದು ನೆನಪಿಗೆ ಬರುತ್ತದೆ. ಒಮ್ಮೆ ಡಿವಿಜಿಯವರಿಗೆ ಸರ್ಕಾರ ದೊಡ್ಡ ಪ್ರಶಸ್ತಿಯೊಂದನ್ನು ನೀಡಿರುತ್ತದೆ. ಈ ಸಮಯದಲ್ಲಿ ಡಿವಿಜಿಯವರ ಅಭಿಮಾನಿಗಳು, ಅವರ ಮನೆಗೆ ತೆರಳಿ ‘ನಿಮ್ಮ ಮನೆಯ ಮುಂದಿನ ರಸ್ತೆಗೆ ನಿಮ್ಮ ಹೆಸರಿಡಬೇಕೆಂದಿದ್ದೇವೆ‘ ಎನ್ನುವ ಪ್ರಸ್ತಾಪವನ್ನು ಮುಂದಿಡುತ್ತಾರೆ. ಆಗ ಬಹಳ ಸಂಕೋಚದಿಂದ ಡಿವಿಜಿಯವರು, ‘ಅಯ್ಯಾ. . . ನನ್ನ ಪಾಡಿಗೆ ನಾನು ಹೇಗೋ ಮರ್ಯಾದೆಯಿಂದ ಮನೆಯೊಳಗೆ ಜೀವಿಸುತ್ತಿದ್ದೇನೆ. ದಯಮಾಡಿ ಬೀದಿಗೆ ನನ್ನ ಹೆಸರಿಟ್ಟು, ನನ್ನನ್ನು ಎಲ್ಲರೂ ತುಳಿಯುವಂತೆ ಮತ್ತು ಎಳೆದಾಡುವಂತೆ ಮಾಡಬೇಡಿರಿ’ ಎಂದು ವಿನಂತಿಸಿದರಂತೆ. ಆ ಮೂಲಕ ಅವರ ಅಭಿಮಾನಿಗಳ ಪ್ರೀತಿಯ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದರಂತೆ. ಈ ಬಗೆಯ ನಿರ್ಲಿಪ್ತ ಮನಃಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಪ್ರದರ್ಶಿಸಬಲ್ಲರೆ? ಕಾದು ನೋಡೋಣ.
-ನಾಗಮಂಗಲ ನರಸಿಂಹ ಮೂರ್ತಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

41 mins ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

2 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

3 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

3 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

3 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 hours ago