ಓದುಗರ ಪತ್ರ

ಓದುಗರ ಪತ್ರ | ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ

ಮೈಸೂರಿನ ಕೆಆರ್‌ಎಸ್ ರಸ್ತೆ ಅಥವಾ ಪ್ರಿನ್ಸೆಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ‘ ಎಂದು ನಾಮಕರಣ ಮಾಡಲು ಮುಂದಾಗಿರುವುದು ಸೂಕ್ತವಲ್ಲ ಅನಿಸುತ್ತದೆ.

ಮೊದಲನೆಯದಾಗಿ ಜೀವಂತವಿರುವ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡುವುದು ಸ್ವಲ್ಪವೂ ಸರಿ ಇಲ್ಲ. ಈ ಬಲವಂತದ ನಾಮಕರಣದ ಬಗ್ಗೆ ಜನ ಏನೇ ಹೇಳಿದರೂ ಇದು ಅರಸೊತ್ತಿಗೆಯ ಬಗ್ಗೆ ಅದಮ್ಯ ಪ್ರೀತಿ, ಗೌರವವಿರುವ ಮೈಸೂರಿಗರಿಗೆ ಬಗೆಯುವ ದ್ರೋಹ ಎಂದೇ ಹೇಳಬೇಕಾಗುತ್ತದೆ. ಡಿವಿಜಿಯವರ ಕುರಿತಾದ ಪ್ರಸಂಗವೊಂದು ನೆನಪಿಗೆ ಬರುತ್ತದೆ. ಒಮ್ಮೆ ಡಿವಿಜಿಯವರಿಗೆ ಸರ್ಕಾರ ದೊಡ್ಡ ಪ್ರಶಸ್ತಿಯೊಂದನ್ನು ನೀಡಿರುತ್ತದೆ. ಈ ಸಮಯದಲ್ಲಿ ಡಿವಿಜಿಯವರ ಅಭಿಮಾನಿಗಳು, ಅವರ ಮನೆಗೆ ತೆರಳಿ ‘ನಿಮ್ಮ ಮನೆಯ ಮುಂದಿನ ರಸ್ತೆಗೆ ನಿಮ್ಮ ಹೆಸರಿಡಬೇಕೆಂದಿದ್ದೇವೆ‘ ಎನ್ನುವ ಪ್ರಸ್ತಾಪವನ್ನು ಮುಂದಿಡುತ್ತಾರೆ. ಆಗ ಬಹಳ ಸಂಕೋಚದಿಂದ ಡಿವಿಜಿಯವರು, ‘ಅಯ್ಯಾ. . . ನನ್ನ ಪಾಡಿಗೆ ನಾನು ಹೇಗೋ ಮರ್ಯಾದೆಯಿಂದ ಮನೆಯೊಳಗೆ ಜೀವಿಸುತ್ತಿದ್ದೇನೆ. ದಯಮಾಡಿ ಬೀದಿಗೆ ನನ್ನ ಹೆಸರಿಟ್ಟು, ನನ್ನನ್ನು ಎಲ್ಲರೂ ತುಳಿಯುವಂತೆ ಮತ್ತು ಎಳೆದಾಡುವಂತೆ ಮಾಡಬೇಡಿರಿ’ ಎಂದು ವಿನಂತಿಸಿದರಂತೆ. ಆ ಮೂಲಕ ಅವರ ಅಭಿಮಾನಿಗಳ ಪ್ರೀತಿಯ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದರಂತೆ. ಈ ಬಗೆಯ ನಿರ್ಲಿಪ್ತ ಮನಃಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಪ್ರದರ್ಶಿಸಬಲ್ಲರೆ? ಕಾದು ನೋಡೋಣ.
-ನಾಗಮಂಗಲ ನರಸಿಂಹ ಮೂರ್ತಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

7 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

10 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

12 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

12 hours ago