ಓದುಗರ ಪತ್ರ

ಓದುಗರ ಪತ್ರ | ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ

ಮೈಸೂರಿನ ಕೆಆರ್‌ಎಸ್ ರಸ್ತೆ ಅಥವಾ ಪ್ರಿನ್ಸೆಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ‘ ಎಂದು ನಾಮಕರಣ ಮಾಡಲು ಮುಂದಾಗಿರುವುದು ಸೂಕ್ತವಲ್ಲ ಅನಿಸುತ್ತದೆ.

ಮೊದಲನೆಯದಾಗಿ ಜೀವಂತವಿರುವ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡುವುದು ಸ್ವಲ್ಪವೂ ಸರಿ ಇಲ್ಲ. ಈ ಬಲವಂತದ ನಾಮಕರಣದ ಬಗ್ಗೆ ಜನ ಏನೇ ಹೇಳಿದರೂ ಇದು ಅರಸೊತ್ತಿಗೆಯ ಬಗ್ಗೆ ಅದಮ್ಯ ಪ್ರೀತಿ, ಗೌರವವಿರುವ ಮೈಸೂರಿಗರಿಗೆ ಬಗೆಯುವ ದ್ರೋಹ ಎಂದೇ ಹೇಳಬೇಕಾಗುತ್ತದೆ. ಡಿವಿಜಿಯವರ ಕುರಿತಾದ ಪ್ರಸಂಗವೊಂದು ನೆನಪಿಗೆ ಬರುತ್ತದೆ. ಒಮ್ಮೆ ಡಿವಿಜಿಯವರಿಗೆ ಸರ್ಕಾರ ದೊಡ್ಡ ಪ್ರಶಸ್ತಿಯೊಂದನ್ನು ನೀಡಿರುತ್ತದೆ. ಈ ಸಮಯದಲ್ಲಿ ಡಿವಿಜಿಯವರ ಅಭಿಮಾನಿಗಳು, ಅವರ ಮನೆಗೆ ತೆರಳಿ ‘ನಿಮ್ಮ ಮನೆಯ ಮುಂದಿನ ರಸ್ತೆಗೆ ನಿಮ್ಮ ಹೆಸರಿಡಬೇಕೆಂದಿದ್ದೇವೆ‘ ಎನ್ನುವ ಪ್ರಸ್ತಾಪವನ್ನು ಮುಂದಿಡುತ್ತಾರೆ. ಆಗ ಬಹಳ ಸಂಕೋಚದಿಂದ ಡಿವಿಜಿಯವರು, ‘ಅಯ್ಯಾ. . . ನನ್ನ ಪಾಡಿಗೆ ನಾನು ಹೇಗೋ ಮರ್ಯಾದೆಯಿಂದ ಮನೆಯೊಳಗೆ ಜೀವಿಸುತ್ತಿದ್ದೇನೆ. ದಯಮಾಡಿ ಬೀದಿಗೆ ನನ್ನ ಹೆಸರಿಟ್ಟು, ನನ್ನನ್ನು ಎಲ್ಲರೂ ತುಳಿಯುವಂತೆ ಮತ್ತು ಎಳೆದಾಡುವಂತೆ ಮಾಡಬೇಡಿರಿ’ ಎಂದು ವಿನಂತಿಸಿದರಂತೆ. ಆ ಮೂಲಕ ಅವರ ಅಭಿಮಾನಿಗಳ ಪ್ರೀತಿಯ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದರಂತೆ. ಈ ಬಗೆಯ ನಿರ್ಲಿಪ್ತ ಮನಃಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಪ್ರದರ್ಶಿಸಬಲ್ಲರೆ? ಕಾದು ನೋಡೋಣ.
-ನಾಗಮಂಗಲ ನರಸಿಂಹ ಮೂರ್ತಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago