ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ ತಪಾಸಣೆ ಚುರುಕು ಮಾಡಿದ ಬಳಿಕ ಕಳೆದ ನಾಲೈದು ವರ್ಷಗಳಿಂದ ರಾತ್ರಿ ಹತ್ತು ಗಂಟೆಯ ನಂತರ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪೊಲೀಸರ ಈ ತಪಾಸಣೆಯನ್ನು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡರು ಆಕ್ಷೇಪಿಸಿರುವುದು ವಿಷಾದಕರ. ಪ್ರವಾಸೋದ್ಯಮದ ಕಾರಣ ನೀಡಿ ತಪಾಸಣೆಯ ವಿರುದ್ಧ ಅವರು ಮಾತನಾಡಿದ್ದಾರೆ. ವಾಸ್ತವವಾಗಿ ಪ್ರವಾಸಕ್ಕೆಂದು ಬರುವ ವಾಹನಗಳ ಚಾಲಕರೇ ಹೆಚ್ಚು ಪಾನಮತ್ತರಾಗಿ ವಾಹನ ಚಲಾವಣೆ ಮಾಡುತ್ತಿದ್ದಾರೆ. ಇದರಿಂದ ಅಪಘಾತಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ವಾಹನಗಳು ನಗರ ಭಾಗಗಳನ್ನು ಪ್ರವೇಶಿಸುವ ಮುನ್ನವೇ ತಪಾಸಣೆ ಮಾಡುವುದು ಸೂಕ್ತ. ಸಮುದಾಯದ ಸುರಕ್ತತೆ ಹಾಳಾದರೂ ಪರವಾಗಿಲ್ಲ, ತಮಗೆ ವ್ಯಾಪಾರವಾದರೆ ಸಾಕು’ ಎಂಬ ಹೋಟೆಲ್ ಮಾಲೀಕರ ಧೋರಣೆ ಖಂಡನೀಯ, ನಾರಾಯಣಗೌಡರಂತಹವರಿಂದ ಈ ರೀತಿಯ ಸ್ವಾರ್ಥ ಬೇಡಿಕೆಯನ್ನು ನಿರೀಕ್ಷಿಸಿರಲಿಲ್ಲ.
-ಸ.ರ.ಸುದರ್ಶನ, ಕುವೆಂಪುನಗರ, ಮೈಸೂರು.
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…