ಓದುಗರ ಪತ್ರ

ಓದುಗರ ಪತ್ರ| ನಾರಾಯಣಗೌಡರ ಹೇಳಿಕೆ ವಿಷಾದಕರ

ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ ತಪಾಸಣೆ ಚುರುಕು ಮಾಡಿದ ಬಳಿಕ ಕಳೆದ ನಾಲೈದು ವರ್ಷಗಳಿಂದ ರಾತ್ರಿ ಹತ್ತು ಗಂಟೆಯ ನಂತರ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪೊಲೀಸರ ಈ ತಪಾಸಣೆಯನ್ನು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡರು ಆಕ್ಷೇಪಿಸಿರುವುದು ವಿಷಾದಕರ. ಪ್ರವಾಸೋದ್ಯಮದ ಕಾರಣ ನೀಡಿ ತಪಾಸಣೆಯ ವಿರುದ್ಧ ಅವರು ಮಾತನಾಡಿದ್ದಾರೆ. ವಾಸ್ತವವಾಗಿ ಪ್ರವಾಸಕ್ಕೆಂದು ಬರುವ ವಾಹನಗಳ ಚಾಲಕರೇ ಹೆಚ್ಚು ಪಾನಮತ್ತರಾಗಿ ವಾಹನ ಚಲಾವಣೆ ಮಾಡುತ್ತಿದ್ದಾರೆ. ಇದರಿಂದ ಅಪಘಾತಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ವಾಹನಗಳು ನಗರ ಭಾಗಗಳನ್ನು ಪ್ರವೇಶಿಸುವ ಮುನ್ನವೇ ತಪಾಸಣೆ ಮಾಡುವುದು ಸೂಕ್ತ. ಸಮುದಾಯದ ಸುರಕ್ತತೆ ಹಾಳಾದರೂ ಪರವಾಗಿಲ್ಲ, ತಮಗೆ ವ್ಯಾಪಾರವಾದರೆ ಸಾಕು’ ಎಂಬ ಹೋಟೆಲ್ ಮಾಲೀಕರ ಧೋರಣೆ ಖಂಡನೀಯ, ನಾರಾಯಣಗೌಡರಂತಹವರಿಂದ ಈ ರೀತಿಯ ಸ್ವಾರ್ಥ ಬೇಡಿಕೆಯನ್ನು ನಿರೀಕ್ಷಿಸಿರಲಿಲ್ಲ.

-ಸ.ರ.ಸುದರ್ಶನ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

13 seconds ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

2 mins ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

10 mins ago

ಅಪ್ಪಂದಿರ ಬದಲು ತಾವೇ ನಾಯಕತ್ವ ಹೊರಲು ಸಜ್ಜಾದ ಪುತ್ರರು

ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್‌ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…

16 mins ago

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

9 hours ago