ಓದುಗರ ಪತ್ರ

ಓದುಗರ ಪತ್ರ| ನಾರಾಯಣಗೌಡರ ಹೇಳಿಕೆ ವಿಷಾದಕರ

ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ ತಪಾಸಣೆ ಚುರುಕು ಮಾಡಿದ ಬಳಿಕ ಕಳೆದ ನಾಲೈದು ವರ್ಷಗಳಿಂದ ರಾತ್ರಿ ಹತ್ತು ಗಂಟೆಯ ನಂತರ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪೊಲೀಸರ ಈ ತಪಾಸಣೆಯನ್ನು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡರು ಆಕ್ಷೇಪಿಸಿರುವುದು ವಿಷಾದಕರ. ಪ್ರವಾಸೋದ್ಯಮದ ಕಾರಣ ನೀಡಿ ತಪಾಸಣೆಯ ವಿರುದ್ಧ ಅವರು ಮಾತನಾಡಿದ್ದಾರೆ. ವಾಸ್ತವವಾಗಿ ಪ್ರವಾಸಕ್ಕೆಂದು ಬರುವ ವಾಹನಗಳ ಚಾಲಕರೇ ಹೆಚ್ಚು ಪಾನಮತ್ತರಾಗಿ ವಾಹನ ಚಲಾವಣೆ ಮಾಡುತ್ತಿದ್ದಾರೆ. ಇದರಿಂದ ಅಪಘಾತಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ವಾಹನಗಳು ನಗರ ಭಾಗಗಳನ್ನು ಪ್ರವೇಶಿಸುವ ಮುನ್ನವೇ ತಪಾಸಣೆ ಮಾಡುವುದು ಸೂಕ್ತ. ಸಮುದಾಯದ ಸುರಕ್ತತೆ ಹಾಳಾದರೂ ಪರವಾಗಿಲ್ಲ, ತಮಗೆ ವ್ಯಾಪಾರವಾದರೆ ಸಾಕು’ ಎಂಬ ಹೋಟೆಲ್ ಮಾಲೀಕರ ಧೋರಣೆ ಖಂಡನೀಯ, ನಾರಾಯಣಗೌಡರಂತಹವರಿಂದ ಈ ರೀತಿಯ ಸ್ವಾರ್ಥ ಬೇಡಿಕೆಯನ್ನು ನಿರೀಕ್ಷಿಸಿರಲಿಲ್ಲ.

-ಸ.ರ.ಸುದರ್ಶನ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

7 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

7 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

7 hours ago