ಓದುಗರ ಪತ್ರ
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, ಕೇಂದ್ರ ತನಿಖಾ ದಳ 12
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ನೀಟ್ ಪರೀಕ್ಷೆಯ ಹಗರಣಗಳು ಬಹುತೇಕ ಉತ್ತರ ಭಾರತದ ರಾಜ್ಯಗಳಲ್ಲಿಯೇ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜ್ಯಗಳು ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ಒತ್ತಾಯಿಸುತ್ತಿವೆ. ಈಗಾಗಲೇ ನೆರೆಯ ತಮಿಳುನಾಡು ಸರ್ಕಾರವೂ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಕೈಗೊಂಡಿದೆ. ನೀಟ್ ಪರೀಕ್ಷೆ ಜಾರಿಯಾದಾಗಿನಿಂದ ನಮ್ಮ ರಾಜ್ಯಕ್ಕೆ ಲಭಿಸುತ್ತಿರುವ ವೈದ್ಯಕೀಯ ಸೀಟುಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು. ರಾಜ್ಯ ಸರ್ಕಾರಗಳೇ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಾತಿ ನೀಡುವಂತಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…