ಓದುಗರ ಪತ್ರ

ಓದುಗರ ಪತ್ರ| ನೀಟ್: ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, ಕೇಂದ್ರ ತನಿಖಾ ದಳ 12
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ನೀಟ್ ಪರೀಕ್ಷೆಯ ಹಗರಣಗಳು ಬಹುತೇಕ ಉತ್ತರ ಭಾರತದ ರಾಜ್ಯಗಳಲ್ಲಿಯೇ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜ್ಯಗಳು ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ಒತ್ತಾಯಿಸುತ್ತಿವೆ. ಈಗಾಗಲೇ ನೆರೆಯ ತಮಿಳುನಾಡು ಸರ್ಕಾರವೂ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಕೈಗೊಂಡಿದೆ. ನೀಟ್ ಪರೀಕ್ಷೆ ಜಾರಿಯಾದಾಗಿನಿಂದ ನಮ್ಮ ರಾಜ್ಯಕ್ಕೆ ಲಭಿಸುತ್ತಿರುವ ವೈದ್ಯಕೀಯ ಸೀಟುಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು. ರಾಜ್ಯ ಸರ್ಕಾರಗಳೇ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿ ನೀಡುವಂತಾಗಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

50 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

4 hours ago