ಓದುಗರ ಪತ್ರ
ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ.
ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಲೇಖಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸಿ ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಆ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದವರ ಸಹಿ ಹಾಗೂ ಸಂಪೂರ್ಣ ವಿಳಾಸಗಳನ್ನು ಸಂಗ್ರಹಿಸಲಾಗಿತ್ತು. ಸಮ್ಮೇಳನಕ್ಕೆ ಆಹ್ವಾನಿಸದ ಮೇಲೆ ಅವರೊಂದಿಗೆ ಸಭೆ ನಡೆಸಿದ ಉದ್ದೇಶವಾದರೂ ಏನು? ಕೋಟ್ಯಂತರ ರೂ. ವ್ಯಯಿಸಿ ಸಮ್ಮೇಳನ ಮಾಡಿ, ಸ್ಥಳೀಯ ಸಾಹಿತಿ ಹಾಗೂ ಲೇಖಕರಿಗೆ ಆಹ್ವಾನ ನೀಡಿಲ್ಲ ಎಂದಾದರೆ ಸಮ್ಮೇಳನ ಅಪೂರ್ಣ ಎಂದರ್ಥ. ಕಾರ್ಯಕ್ರಮದಲ್ಲಿ ಕೆಲ ಆಯ್ದ ಸಾಹಿತಿಗಳಿಗೆ ಮಾತ್ರ ಆಹ್ವಾನ ನೀಡಿದ್ದು, ಇತರೆ ಸಾಹಿತಿಗಳಿಗೆ ಬೇಸರ ತಂದಿದೆ. -ಸಿ. ಸಿದ್ದರಾಜು, ಆಲಕೆರೆ, ಮಂಡ್ಯ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…