ಓದುಗರ ಪತ್ರ

ಓದುಗರ ಪತ್ರ | ಒಂದು ದೇಶ ಒಂದು ಚುನಾವಣೆ: ಒಮ್ಮತ ಮೂಡಲಿ

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ೨೬೯ ಸದಸ್ಯರ ಬೆಂಬಲ ದೊರಕಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲಕ್ಕೆ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಸಹಜವಾಗಿಯೇ ಪ್ರಬಲ ಪತ್ರಿಪಕ್ಷವಾದ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧಿಸುವ ಮೂಲಕ ಇದೊಂದು ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯೋಜನೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿವೆ.

ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಸರ್ಕಾರಕ್ಕೆ ಚುನಾವಣಾ ವೆಚ್ಚ ಕಡಿಮೆಯಾಗುತ್ತದೆ. ಅಲ್ಲದೆ ರಾಜಕೀಯ ಪಕ್ಷಗಳಿಗೆ ಪ್ರಚಾರದ ವೆಚ್ಚವನ್ನೂ ತಗ್ಗಿಸುತ್ತದೆ. ಈ ಚುನಾವಣಾ ವ್ಯವಸ್ಥೆಯನ್ನು ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳ ಮರು ಹೊಂದಾಣಿಕೆ ಮತ್ತು ಕಾನೂನುಬದ್ಧ ಚೌಕಟ್ಟು ರೂಪಿಸುವುದು ಅವಶ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

57 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

1 hour ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

1 hour ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

2 hours ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

3 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago