ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ೨೬೯ ಸದಸ್ಯರ ಬೆಂಬಲ ದೊರಕಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲಕ್ಕೆ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಸಹಜವಾಗಿಯೇ ಪ್ರಬಲ ಪತ್ರಿಪಕ್ಷವಾದ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧಿಸುವ ಮೂಲಕ ಇದೊಂದು ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯೋಜನೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿವೆ.
ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಸರ್ಕಾರಕ್ಕೆ ಚುನಾವಣಾ ವೆಚ್ಚ ಕಡಿಮೆಯಾಗುತ್ತದೆ. ಅಲ್ಲದೆ ರಾಜಕೀಯ ಪಕ್ಷಗಳಿಗೆ ಪ್ರಚಾರದ ವೆಚ್ಚವನ್ನೂ ತಗ್ಗಿಸುತ್ತದೆ. ಈ ಚುನಾವಣಾ ವ್ಯವಸ್ಥೆಯನ್ನು ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳ ಮರು ಹೊಂದಾಣಿಕೆ ಮತ್ತು ಕಾನೂನುಬದ್ಧ ಚೌಕಟ್ಟು ರೂಪಿಸುವುದು ಅವಶ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…