ಸೌಹಾರ್ದಯುತ ಸಮಾಜಕ್ಕಾಗಿ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ‘ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ’ ಎಂಬ ತತ್ವ ಪಾಲಿಸಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಮ್ಮೂರಿನಲ್ಲೇ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ, ಇನ್ನು ಅವರು ಮನೆಗೊಂದೊಂದು ಪ್ರತ್ಯೇಕ ಬಾವಿಯನ್ನೇ ನಿರ್ಮಿಸಿಕೊಂಡಿದ್ದಾರೆ.
ಹೀಗಿರುವಾಗ ಒಂದು ಬಾವಿಯ ಬಳಕೆ ಸಾಧ್ಯವೇ? ಅದಕ್ಕೂ ಮೀರಿ ಜಾತಿಗೊಂದೊಂದು ಸ್ಮಶಾನ; ಅದಕ್ಕೊಂದು ಬೋರ್ಡು. . . ಹೀಗಿರುವಾಗ ಎಲ್ಲರಿಗೂ ಒಂದೇ ಸ್ಮಶಾನ ಎಂಬುದು ಕಲ್ಪನೆಯಷ್ಟೇ. ವಾಸ್ತವ ಹೀಗಿರುವಾಗ ಮೋಹನ್ ಭಾಗವತ್ ಅವರ ಮಾತು ನಿಜವಾಗಿ ಪಾಲನೆಯಾಗಬೇಕೆಂದರೆ ಸ್ವತಃ ಅವರೇ ಬಂದು ಹೇಳಬೇಕೇನೋ, ಒಂದು ವೇಳೆ ಹೇಳಿದರೂ ಪಾಲನೆ ಮಾಡುತ್ತಾರೆಯೇ ಎಂಬುದು ಉತ್ತರ ಸಿಗದ ಪ್ರಶ್ನೆಯಾಗಿದೆ.
-ನವೀನ್ ಕೋಳೂರು, ಮೈಸೂರು
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…