ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಬರೆಯಬೇಕಿತ್ತು. ಇದರಿಂದಾಗಿ ರೈಲ್ವೆ ಇಲಾಖೆಯ ಬಹುತೇಕ ಹುದ್ದೆಗಳು ಉತ್ತರ ಭಾರತದ ಅಭ್ಯರ್ಥಿಗಳ ಪಾಲಾಗುತ್ತಿದ್ದವು. ಈಗ ಸಚಿವ ವಿ. ಸೋಮಣ್ಣರವರು ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ತಿಳಿಸಿರುವುದು ಕರ್ನಾಟಕದ ಉದ್ಯೋಗಾಂಕ್ಷಿಗಳಲ್ಲಿ ಆಶಾಕಿರಣ ಮೂಡಿಸಿದಂತಿದೆ. ಇದರೊಂದಿಗೆ ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ‘ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನೂ ಕನ್ನಡದಲ್ಲಿ ನಡೆಸುವಂತೆ ರೈಲ್ವೆ ಮಂಡಳಿಗೆ ಸುತ್ತೋಲೆ ಹೊರಡಿಸಲು ಆದೇಶ ನೀಡಿರುವುದು ಸಂತಸದ ವಿಚಾರ. ಈ ಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ಕರ್ನಾಟಕದ ಹೆಚ್ಚಿನ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಅವಕಾಶವಾದಂತಾಗಿದ್ದು, ಈ ಆದೇಶ ನೀಡಿದ ಸಚಿವ ವಿ.ಸೋಮಣ್ಣನವರಿಗೆ ಧನ್ಯವಾದಗಳು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…