ಓದುಗರ ಪತ್ರ

ಓದುಗರ ಪತ್ರ | ನಮ್ಮ ಮೆಟ್ರೋ ಈಗ ಉಳ್ಳವರ ಮೆಟ್ರೋ!

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡುವುದು ಸಮಂಜಸವಲ್ಲ . ಮೆಟ್ರೋ ಪ್ರಯಾಣ ದರ ಶೇ. ೧೦ರಿಂದ ಶೇ. ೧೫ಕ್ಕೆ ಏರಿಕೆಯಾಗಿದ್ದರೆ ಪ್ರಯಾಣಿಕರು ಇದು ಅನಿವಾರ್ಯವೆಂದು ವಾಸ್ತವದ ನೆಲೆಗಟ್ಟಿನಲ್ಲಿ ಸ್ಪಂದಿಸುತ್ತಿದ್ದರೇನೊ? ಆದರೆ ಸರ್ಕಾರ ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡಿರುವುದರಿಂದ ಗ್ರಾಹಕರು ಇದು ‘ನಮ್ಮ ಮೆಟ್ರೋ’ ಅಲ್ಲ ‘ಉಳ್ಳವರ ಮೆಟ್ರೋ’ ಎನ್ನುವಂತಾಗಿದೆ. ಸದ್ಯ ಪ್ರಯಾಣ ದರ ಏರಿಕೆಯಿಂದ ಬೇಸತ್ತ ಪ್ರಯಾಣಿಕರು ಮೆಟ್ರೋ ಬಿಟ್ಟು ರಸ್ತೆ ಸಾರಿಗೆಯ ಮೊರೆ ಹೋಗಿದ್ದು, ಇದರಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯಂತೆ. ಇದು ಮೆಟ್ರೋ ನಿಗಮದ ಕಣ್ಣು ತೆರೆಸಬೇಕು ಮತ್ತು ಅದು ತನ್ನ ನಿಧಾರವನ್ನು ಮರುಪರಿಶೀಲಿಸುವಂತೆ ಮಾಡಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

1.65 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಬೆಳಕು

ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…

4 seconds ago

‘ನಾನು ಬೆಳೆಸಿದ ಕಾಡಿನಲ್ಲಿ ನನಗೆ ವಾಸಕ್ಕೆ ಜಾಗ ಇಲ್ವಾ?’

ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…

6 mins ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

10 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

14 hours ago