ಓದುಗರ ಪತ್ರ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡುವುದು ಸಮಂಜಸವಲ್ಲ . ಮೆಟ್ರೋ ಪ್ರಯಾಣ ದರ ಶೇ. ೧೦ರಿಂದ ಶೇ. ೧೫ಕ್ಕೆ ಏರಿಕೆಯಾಗಿದ್ದರೆ ಪ್ರಯಾಣಿಕರು ಇದು ಅನಿವಾರ್ಯವೆಂದು ವಾಸ್ತವದ ನೆಲೆಗಟ್ಟಿನಲ್ಲಿ ಸ್ಪಂದಿಸುತ್ತಿದ್ದರೇನೊ? ಆದರೆ ಸರ್ಕಾರ ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡಿರುವುದರಿಂದ ಗ್ರಾಹಕರು ಇದು ‘ನಮ್ಮ ಮೆಟ್ರೋ’ ಅಲ್ಲ ‘ಉಳ್ಳವರ ಮೆಟ್ರೋ’ ಎನ್ನುವಂತಾಗಿದೆ. ಸದ್ಯ ಪ್ರಯಾಣ ದರ ಏರಿಕೆಯಿಂದ ಬೇಸತ್ತ ಪ್ರಯಾಣಿಕರು ಮೆಟ್ರೋ ಬಿಟ್ಟು ರಸ್ತೆ ಸಾರಿಗೆಯ ಮೊರೆ ಹೋಗಿದ್ದು, ಇದರಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯಂತೆ. ಇದು ಮೆಟ್ರೋ ನಿಗಮದ ಕಣ್ಣು ತೆರೆಸಬೇಕು ಮತ್ತು ಅದು ತನ್ನ ನಿಧಾರವನ್ನು ಮರುಪರಿಶೀಲಿಸುವಂತೆ ಮಾಡಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…
ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…