ಓದುಗರ ಪತ್ರ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡುವುದು ಸಮಂಜಸವಲ್ಲ . ಮೆಟ್ರೋ ಪ್ರಯಾಣ ದರ ಶೇ. ೧೦ರಿಂದ ಶೇ. ೧೫ಕ್ಕೆ ಏರಿಕೆಯಾಗಿದ್ದರೆ ಪ್ರಯಾಣಿಕರು ಇದು ಅನಿವಾರ್ಯವೆಂದು ವಾಸ್ತವದ ನೆಲೆಗಟ್ಟಿನಲ್ಲಿ ಸ್ಪಂದಿಸುತ್ತಿದ್ದರೇನೊ? ಆದರೆ ಸರ್ಕಾರ ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡಿರುವುದರಿಂದ ಗ್ರಾಹಕರು ಇದು ‘ನಮ್ಮ ಮೆಟ್ರೋ’ ಅಲ್ಲ ‘ಉಳ್ಳವರ ಮೆಟ್ರೋ’ ಎನ್ನುವಂತಾಗಿದೆ. ಸದ್ಯ ಪ್ರಯಾಣ ದರ ಏರಿಕೆಯಿಂದ ಬೇಸತ್ತ ಪ್ರಯಾಣಿಕರು ಮೆಟ್ರೋ ಬಿಟ್ಟು ರಸ್ತೆ ಸಾರಿಗೆಯ ಮೊರೆ ಹೋಗಿದ್ದು, ಇದರಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯಂತೆ. ಇದು ಮೆಟ್ರೋ ನಿಗಮದ ಕಣ್ಣು ತೆರೆಸಬೇಕು ಮತ್ತು ಅದು ತನ್ನ ನಿಧಾರವನ್ನು ಮರುಪರಿಶೀಲಿಸುವಂತೆ ಮಾಡಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…