ಓದುಗರ ಪತ್ರ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡುವುದು ಸಮಂಜಸವಲ್ಲ . ಮೆಟ್ರೋ ಪ್ರಯಾಣ ದರ ಶೇ. ೧೦ರಿಂದ ಶೇ. ೧೫ಕ್ಕೆ ಏರಿಕೆಯಾಗಿದ್ದರೆ ಪ್ರಯಾಣಿಕರು ಇದು ಅನಿವಾರ್ಯವೆಂದು ವಾಸ್ತವದ ನೆಲೆಗಟ್ಟಿನಲ್ಲಿ ಸ್ಪಂದಿಸುತ್ತಿದ್ದರೇನೊ? ಆದರೆ ಸರ್ಕಾರ ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡಿರುವುದರಿಂದ ಗ್ರಾಹಕರು ಇದು ‘ನಮ್ಮ ಮೆಟ್ರೋ’ ಅಲ್ಲ ‘ಉಳ್ಳವರ ಮೆಟ್ರೋ’ ಎನ್ನುವಂತಾಗಿದೆ. ಸದ್ಯ ಪ್ರಯಾಣ ದರ ಏರಿಕೆಯಿಂದ ಬೇಸತ್ತ ಪ್ರಯಾಣಿಕರು ಮೆಟ್ರೋ ಬಿಟ್ಟು ರಸ್ತೆ ಸಾರಿಗೆಯ ಮೊರೆ ಹೋಗಿದ್ದು, ಇದರಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯಂತೆ. ಇದು ಮೆಟ್ರೋ ನಿಗಮದ ಕಣ್ಣು ತೆರೆಸಬೇಕು ಮತ್ತು ಅದು ತನ್ನ ನಿಧಾರವನ್ನು ಮರುಪರಿಶೀಲಿಸುವಂತೆ ಮಾಡಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…