ಓದುಗರ ಪತ್ರ

ಓದುಗರ ಪತ್ರ: ಪೇಜಾವರ ಶ್ರೀಗಳ ಹೇಳಿಕೆ ಖಂಡನೀಯ

ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು ‘ನಮ್ಮನ್ನೂ ಗೌರವಿಸುವಂತಹ ಸಂವಿಧಾನ ಜಾರಿಗೆ ಬರಬೇಕು’ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ತಿಳಿಯದು.

ದೇಶದಲ್ಲಿನ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವಕ್ಕೆ ಧಕ್ಕೆಯಾಗದಂತ ಕಾನೂನು ರಚಿಸಿ ಎಲ್ಲರೂ ಸಮಾನವಾಗಿ, ಪರಸ್ಪರ ಗೌರವಯುತವಾಗಿ ಬದುಕುವ ಅವಕಾಶವನ್ನು ಸಂವಿಧಾನಕಲ್ಲಿಸಿದೆ. ಹೀಗಿರುವಾಗಬೇಕಾದರ ಶ್ರೀಗಳ ಈ ಮನವಿಗೆ ಯಾವುದೇ ಮೌಲ್ಯವಿರುವುದಿಲ್ಲ.

ಕೇಂದ್ರ ಸರ್ಕಾರ ಈಗಾಗಲೇ ಶೇ.3ರಷ್ಟಿರುವ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದೆ. ಇದರಿಂದಾಗಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಷ್ಟಿದ್ದರೂ ಪೇಜಾವರ ಶ್ರೀಗಳು ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಕೊಡುವುದು ಖಂಡನೀಯ. ಇಂತಹ ಹೇಳಿಕೆಗಳು ಮಠ ಮಾನ್ಯಗಳ ಹಾಗೂ ಸ್ವಾಮೀಜಿಗಳ ಮೇಲಿನ ಗೌರವಕ್ಕೆ ಧಕ್ಕೆಯುಂಟು ಮಾಡಬಹುದು.

ಓ.ರಾಜು, ಅಶೋಕಪುರಂ, ಸಂಚಾಲಕರು, ದಲಿತ ಸಂಘಟನೆಗಳ ಒಕ್ಕೂಟ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

4 mins ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

7 mins ago

‘ದುರಸ್ತಿ ನೆಪದಲ್ಲಿ ರಸ್ತೆ ಅಗೆದು ಸಂಚಾರಕ್ಕೆ ಅಡಚಣೆ’

ಎಸ್.ಪ್ರಶಾಂತ್ ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು ಮೈಸೂರು: ಕಳೆದ ಕೆಲ ತಿಂಗಳಿನಿಂದ…

12 mins ago

ಪೋಷಕರೊಂದಿಗೆ ಸ್ಪೇನ್‌ಗೆ ಹಾರಿದ ಪುಟ್ಟ ಕಂದಮ್ಮ

ಕೆ.ಬಿ.ರಮೇಶನಾಯಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಭಾರತೀಯ ಮಗು ದತ್ತು ಪಡೆದ ವಿದೇಶಿ ದಂಪತಿ ಮೈಸೂರು: ಬಹುಶಃ ಹೆತ್ತಮ್ಮ ಇದ್ದರೂ…

17 mins ago

‘ಸಫಾರಿ; ನಮ್ಮ ಉದ್ಯೋಗದ ಭರವಸೆಯ ದಾರಿ’

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಸಫಾರಿ ಪುನಾರಂಭವಾಗಿರುವುದರಿಂದ ವನ್ಯಜೀವಿಗಳಿಗೆ ತೊಂದರೆ ಆಗಿಲ್ಲ. ನಮ್ಮ ಹೊಟ್ಟೆ ಹೊರೆಯಲು ಸಹಾಯವಾಗಿದೆ... ಕಾಡ್ಗಿಚ್ಚು ನಂದಿಸುವ ಸಂದರ್ಭಗಳಲ್ಲಿ…

48 mins ago