ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು ‘ನಮ್ಮನ್ನೂ ಗೌರವಿಸುವಂತಹ ಸಂವಿಧಾನ ಜಾರಿಗೆ ಬರಬೇಕು’ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ತಿಳಿಯದು.
ದೇಶದಲ್ಲಿನ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವಕ್ಕೆ ಧಕ್ಕೆಯಾಗದಂತ ಕಾನೂನು ರಚಿಸಿ ಎಲ್ಲರೂ ಸಮಾನವಾಗಿ, ಪರಸ್ಪರ ಗೌರವಯುತವಾಗಿ ಬದುಕುವ ಅವಕಾಶವನ್ನು ಸಂವಿಧಾನಕಲ್ಲಿಸಿದೆ. ಹೀಗಿರುವಾಗಬೇಕಾದರ ಶ್ರೀಗಳ ಈ ಮನವಿಗೆ ಯಾವುದೇ ಮೌಲ್ಯವಿರುವುದಿಲ್ಲ.
ಕೇಂದ್ರ ಸರ್ಕಾರ ಈಗಾಗಲೇ ಶೇ.3ರಷ್ಟಿರುವ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದೆ. ಇದರಿಂದಾಗಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಷ್ಟಿದ್ದರೂ ಪೇಜಾವರ ಶ್ರೀಗಳು ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಕೊಡುವುದು ಖಂಡನೀಯ. ಇಂತಹ ಹೇಳಿಕೆಗಳು ಮಠ ಮಾನ್ಯಗಳ ಹಾಗೂ ಸ್ವಾಮೀಜಿಗಳ ಮೇಲಿನ ಗೌರವಕ್ಕೆ ಧಕ್ಕೆಯುಂಟು ಮಾಡಬಹುದು.
ಓ.ರಾಜು, ಅಶೋಕಪುರಂ, ಸಂಚಾಲಕರು, ದಲಿತ ಸಂಘಟನೆಗಳ ಒಕ್ಕೂಟ, ಮೈಸೂರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…