ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು ‘ನಮ್ಮನ್ನೂ ಗೌರವಿಸುವಂತಹ ಸಂವಿಧಾನ ಜಾರಿಗೆ ಬರಬೇಕು’ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ತಿಳಿಯದು.
ದೇಶದಲ್ಲಿನ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವಕ್ಕೆ ಧಕ್ಕೆಯಾಗದಂತ ಕಾನೂನು ರಚಿಸಿ ಎಲ್ಲರೂ ಸಮಾನವಾಗಿ, ಪರಸ್ಪರ ಗೌರವಯುತವಾಗಿ ಬದುಕುವ ಅವಕಾಶವನ್ನು ಸಂವಿಧಾನಕಲ್ಲಿಸಿದೆ. ಹೀಗಿರುವಾಗಬೇಕಾದರ ಶ್ರೀಗಳ ಈ ಮನವಿಗೆ ಯಾವುದೇ ಮೌಲ್ಯವಿರುವುದಿಲ್ಲ.
ಕೇಂದ್ರ ಸರ್ಕಾರ ಈಗಾಗಲೇ ಶೇ.3ರಷ್ಟಿರುವ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದೆ. ಇದರಿಂದಾಗಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಷ್ಟಿದ್ದರೂ ಪೇಜಾವರ ಶ್ರೀಗಳು ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಕೊಡುವುದು ಖಂಡನೀಯ. ಇಂತಹ ಹೇಳಿಕೆಗಳು ಮಠ ಮಾನ್ಯಗಳ ಹಾಗೂ ಸ್ವಾಮೀಜಿಗಳ ಮೇಲಿನ ಗೌರವಕ್ಕೆ ಧಕ್ಕೆಯುಂಟು ಮಾಡಬಹುದು.
ಓ.ರಾಜು, ಅಶೋಕಪುರಂ, ಸಂಚಾಲಕರು, ದಲಿತ ಸಂಘಟನೆಗಳ ಒಕ್ಕೂಟ, ಮೈಸೂರು.
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…