ಓದುಗರ ಪತ್ರ

ಓದುಗರ ಪತ್ರ | ಬೆಲೆ ಏರಿಕೆ ವಿರುದ್ಧ ಜನ ದಂಗೆ ಹೇಳಬಹುದು

ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲರೇ ತಿಳಿಸಬೇಕಿದೆ. ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಇದರಿಂದಾಗಿ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಸರ್ಕಾರ ಈ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಿದ್ದರೆ ಕೂಲಿ ಕಾರ್ಮಿಕರು, ನೌಕರರು, ಮಧ್ಯಮ ವರ್ಗದ ಜನರು ಜೀವನ ಸಾಗಿಸುವುದಾದರೂ ಹೇಗೆ? ಸರ್ಕಾರ ಬಡಜನರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ ಗ್ಯಾರಂಟಿ ಯೋಜನೆಗಳನ್ನು ನೀಡಿಯೂ ಫಲವೇನು? ಹೀಗೆ ಸರ್ಕಾರ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಾ ಹೋದರೆ ಮುಂದೊಂದು ದಿನ ಜನ ತಾಳ್ಮೆಗೆಟ್ಟು ಸರ್ಕಾರದ ವಿರುದ್ಧ ದಂಗೆ ಏಳುವ ಪ್ರಸಂಗ ಬಂದರೂ ಆಶ್ಚರ್ಯಪಡಬೇಕಾಗಿಲ್ಲ.

-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago