ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲರೇ ತಿಳಿಸಬೇಕಿದೆ. ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಇದರಿಂದಾಗಿ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಸರ್ಕಾರ ಈ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಿದ್ದರೆ ಕೂಲಿ ಕಾರ್ಮಿಕರು, ನೌಕರರು, ಮಧ್ಯಮ ವರ್ಗದ ಜನರು ಜೀವನ ಸಾಗಿಸುವುದಾದರೂ ಹೇಗೆ? ಸರ್ಕಾರ ಬಡಜನರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ ಗ್ಯಾರಂಟಿ ಯೋಜನೆಗಳನ್ನು ನೀಡಿಯೂ ಫಲವೇನು? ಹೀಗೆ ಸರ್ಕಾರ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಾ ಹೋದರೆ ಮುಂದೊಂದು ದಿನ ಜನ ತಾಳ್ಮೆಗೆಟ್ಟು ಸರ್ಕಾರದ ವಿರುದ್ಧ ದಂಗೆ ಏಳುವ ಪ್ರಸಂಗ ಬಂದರೂ ಆಶ್ಚರ್ಯಪಡಬೇಕಾಗಿಲ್ಲ.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…