Mysore
29
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಓದುಗರ ಪತ್ರ: ನೀರು ಪೋಲಾಗುವುದನ್ನು ತಡೆಗಟ್ಟಿ

ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ.

ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ ನಿತ್ಯ ನೂರಾರು ಲೀಟರ್ ನೀರು ಪೋಲಾಗಿ ರಸ್ತೆಯ ಮೇಲೆ ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಪೋಲಾಗುತ್ತಿರುವ ನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ಎಂ. ಅಭಿಷೇಕ್ ಕಲ್ಲಂಬಾಳು, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು.

 

Tags:
error: Content is protected !!