ಎಚ್. ಡಿ. ಕೋಟೆ ತಾಲ್ಲೂಕಿನ ಕಾರಾಪುರ, ಗುಂಡತ್ತೂರು, ಮಗ್ಗೆ, ಹೊಸಹಳ್ಳಿ ಅಂತರಸಂತೆ, ಲಕ್ಷಿ ಪುರ, ಕೆ. ಜಿ. ಹಳ್ಳಿ ಮಾರ್ಗವಾಗಿ ಎಚ್. ಡಿ. ಕೋಟೆಗೆ ತೆರಳಲು ಬಸ್ಗಳ ಸಂಖ್ಯೆ ಕಡಿಮೆ ಇದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಮಹಿಳೆ ಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ- ಕಾಲೇಜು ಹಾಗೂ ಇತರೆ ಕೆಲಸ ಕಾರ್ಯಗಳಿಗಾಗಿ ಈ ಮಾರ್ಗ ದಲ್ಲಿ ಸಂಚರಿಸುವ ಬಸ್ಗಳನ್ನೇ ಹಿಡಿದುಕೊಂಡು ಎಚ್. ಡಿ. ಕೋಟೆ, ಹ್ಯಾಂಡ್ ಪೋಸ್ಟ್ ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಬೆಳಗಿನ ವೇಳೆ ಈ ಮಾರ್ಗವಾಗಿ ಸಂಚರಿಸುವ ಬಸ್ಗಳ ಸಂಖ್ಯೆ ಕಡಿಮೆ ಇದ್ದು, ಒಂದೇ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತುಂಬಿಕೊಳ್ಳುತ್ತಿದ್ದಾರೆ.
ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬಸ್ನಲ್ಲಿ ಸ್ಥಳಾವಕಾಶವಿಲ್ಲದೆ ಕೆಲ ವಿದ್ಯಾರ್ಥಿಗಳು ಬಾಗಿಲ ಬಳಿ ಜೋತು ಹಾಕಿಕೊಂಡು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಕೆಲ ಬಾರಿಯಂತೂ ಸಣ್ಣ ಮಕ್ಕಳೂ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದಾರೆ. ಇದರಿಂದ ಅಪಾಯ ಉಂಟಾಗುವ ಆತಂಕ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಮಾರ್ಗವಾಗಿ ಬೆಳಗಿನ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್ಗಳನ್ನು ಬಿಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಿದೆ.
-ರಾಜೇಶ್, ಅಂತರಸಂತೆ, ಎಚ್. ಡಿ. ಕೋಟೆ ತಾ.
ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ರಾಜ್ಯದ…
ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…
ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…
ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…