ಎಚ್. ಡಿ. ಕೋಟೆ ತಾಲ್ಲೂಕಿನ ಕಾರಾಪುರ, ಗುಂಡತ್ತೂರು, ಮಗ್ಗೆ, ಹೊಸಹಳ್ಳಿ ಅಂತರಸಂತೆ, ಲಕ್ಷಿ ಪುರ, ಕೆ. ಜಿ. ಹಳ್ಳಿ ಮಾರ್ಗವಾಗಿ ಎಚ್. ಡಿ. ಕೋಟೆಗೆ ತೆರಳಲು ಬಸ್ಗಳ ಸಂಖ್ಯೆ ಕಡಿಮೆ ಇದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಮಹಿಳೆ ಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ- ಕಾಲೇಜು ಹಾಗೂ ಇತರೆ ಕೆಲಸ ಕಾರ್ಯಗಳಿಗಾಗಿ ಈ ಮಾರ್ಗ ದಲ್ಲಿ ಸಂಚರಿಸುವ ಬಸ್ಗಳನ್ನೇ ಹಿಡಿದುಕೊಂಡು ಎಚ್. ಡಿ. ಕೋಟೆ, ಹ್ಯಾಂಡ್ ಪೋಸ್ಟ್ ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಬೆಳಗಿನ ವೇಳೆ ಈ ಮಾರ್ಗವಾಗಿ ಸಂಚರಿಸುವ ಬಸ್ಗಳ ಸಂಖ್ಯೆ ಕಡಿಮೆ ಇದ್ದು, ಒಂದೇ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತುಂಬಿಕೊಳ್ಳುತ್ತಿದ್ದಾರೆ.
ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬಸ್ನಲ್ಲಿ ಸ್ಥಳಾವಕಾಶವಿಲ್ಲದೆ ಕೆಲ ವಿದ್ಯಾರ್ಥಿಗಳು ಬಾಗಿಲ ಬಳಿ ಜೋತು ಹಾಕಿಕೊಂಡು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಕೆಲ ಬಾರಿಯಂತೂ ಸಣ್ಣ ಮಕ್ಕಳೂ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದಾರೆ. ಇದರಿಂದ ಅಪಾಯ ಉಂಟಾಗುವ ಆತಂಕ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಮಾರ್ಗವಾಗಿ ಬೆಳಗಿನ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್ಗಳನ್ನು ಬಿಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಿದೆ.
-ರಾಜೇಶ್, ಅಂತರಸಂತೆ, ಎಚ್. ಡಿ. ಕೋಟೆ ತಾ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…