ಓದುಗರ ಪತ್ರ| ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಕಾರಾಪುರ, ಗುಂಡತ್ತೂರು, ಮಗ್ಗೆ, ಹೊಸಹಳ್ಳಿ ಅಂತರಸಂತೆ, ಲಕ್ಷಿ ಪುರ, ಕೆ. ಜಿ. ಹಳ್ಳಿ ಮಾರ್ಗವಾಗಿ ಎಚ್. ಡಿ. ಕೋಟೆಗೆ ತೆರಳಲು ಬಸ್‌ಗಳ ಸಂಖ್ಯೆ ಕಡಿಮೆ ಇದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಮಹಿಳೆ ಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ- ಕಾಲೇಜು ಹಾಗೂ ಇತರೆ ಕೆಲಸ ಕಾರ್ಯಗಳಿಗಾಗಿ ಈ ಮಾರ್ಗ ದಲ್ಲಿ ಸಂಚರಿಸುವ ಬಸ್‌ಗಳನ್ನೇ ಹಿಡಿದುಕೊಂಡು ಎಚ್. ಡಿ. ಕೋಟೆ, ಹ್ಯಾಂಡ್ ಪೋಸ್ಟ್ ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಬೆಳಗಿನ ವೇಳೆ ಈ ಮಾರ್ಗವಾಗಿ ಸಂಚರಿಸುವ ಬಸ್‌ಗಳ ಸಂಖ್ಯೆ ಕಡಿಮೆ ಇದ್ದು, ಒಂದೇ ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತುಂಬಿಕೊಳ್ಳುತ್ತಿದ್ದಾರೆ.

ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬಸ್‌ನಲ್ಲಿ ಸ್ಥಳಾವಕಾಶವಿಲ್ಲದೆ ಕೆಲ ವಿದ್ಯಾರ್ಥಿಗಳು ಬಾಗಿಲ ಬಳಿ ಜೋತು ಹಾಕಿಕೊಂಡು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಕೆಲ ಬಾರಿಯಂತೂ ಸಣ್ಣ ಮಕ್ಕಳೂ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದಾರೆ. ಇದರಿಂದ ಅಪಾಯ ಉಂಟಾಗುವ ಆತಂಕ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಮಾರ್ಗವಾಗಿ ಬೆಳಗಿನ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್‌ಗಳನ್ನು ಬಿಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಿದೆ.

-ರಾಜೇಶ್, ಅಂತರಸಂತೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago