ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಒತ್ತಡದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಲಾಖೆಯ ಸಹಾಯವಾಣಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಅಂಕಗಳನ್ನೇ ಮಾನದಂಡವಾಗಿಸಿಕೊಂಡಿರುವ ಈ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕುಗ್ಗಿಸುತ್ತಿದೆ. ಕೇವಲ ಪರೀಕ್ಷೆಗಳನ್ನು ನಡೆಸುವುದರಲ್ಲಿ ಮಗ್ನವಾಗಿರುವ ಸರ್ಕಾರ ಪ್ರತಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಪ್ತ ಸಮಾಲೋಚನೆ ಕೇಂದ್ರಗಳನ್ನು ಸ್ಥಾಪಿಸಲಿ. ವಿದ್ಯಾರ್ಥಿಗಳ ಜೀವಕ್ಕಿಂತ ಅಂಕಪಟ್ಟಿ ಮುಖ್ಯವಲ್ಲ ಎಂಬ ಕನಿಷ್ಠ ಜ್ಞಾನವಿಲ್ಲದ ಇಲಾಖೆಯ ಮೌನವು ಈ ಶೈಕ್ಷಣಿಕ ಕೊಲೆಗಳಿಗೆ ನೇರ ಹೊಣೆಯಾಗಿದೆ. ಕೂಡಲೇ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ ಆತ್ಮಹತ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳುವುದು ಅಗತ್ಯ.
– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…