ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಒತ್ತಡದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಲಾಖೆಯ ಸಹಾಯವಾಣಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಅಂಕಗಳನ್ನೇ ಮಾನದಂಡವಾಗಿಸಿಕೊಂಡಿರುವ ಈ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕುಗ್ಗಿಸುತ್ತಿದೆ. ಕೇವಲ ಪರೀಕ್ಷೆಗಳನ್ನು ನಡೆಸುವುದರಲ್ಲಿ ಮಗ್ನವಾಗಿರುವ ಸರ್ಕಾರ ಪ್ರತಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಪ್ತ ಸಮಾಲೋಚನೆ ಕೇಂದ್ರಗಳನ್ನು ಸ್ಥಾಪಿಸಲಿ. ವಿದ್ಯಾರ್ಥಿಗಳ ಜೀವಕ್ಕಿಂತ ಅಂಕಪಟ್ಟಿ ಮುಖ್ಯವಲ್ಲ ಎಂಬ ಕನಿಷ್ಠ ಜ್ಞಾನವಿಲ್ಲದ ಇಲಾಖೆಯ ಮೌನವು ಈ ಶೈಕ್ಷಣಿಕ ಕೊಲೆಗಳಿಗೆ ನೇರ ಹೊಣೆಯಾಗಿದೆ. ಕೂಡಲೇ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ ಆತ್ಮಹತ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳುವುದು ಅಗತ್ಯ.
– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…