ಓದುಗರ ಪತ್ರ

ಓದುಗರ ಪತ್ರ: ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿ

ಗ್ರಾಮಗಳಲ್ಲಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಈ ಆಸ್ಪತ್ರೆಗಳ ಪೈಕಿ ಕೆಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಇನ್ನೂ ಕೆಲವು ಕಡೆ ವೈದ್ಯರೇ ಇಲ್ಲದೆ ಅವು ಸಾರ್ವಜನಿಕ ಸೇವೆಯಿಂದ ದೂರಾಗಿವೆ. ಗ್ರಾಮೀಣ ಭಾಗದಲ್ಲಿ ಬಡವರ್ಗದ ಜನರು ಹೆಚ್ಚಾಗಿದ್ದು, ಕೃಷಿ, ಕೂಲಿ,ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಅಂತಹವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಆದರೆ ಇಲ್ಲಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದ ಪರಿಣಾಮ ಗುಣಮಟ್ಟದ ಚಿಕಿತ್ಸೆ ಸಿಗದೆ ಜನರು ಖಾಸಗಿ ಆಸ್ಪತ್ರೆಗಳ ಮೊರೆಹೋಗುವಂತಾಗಿದೆ. ಅಲ್ಲದೆ ಕೆಲ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪವೂ ಇದೆ.

ಇನ್ನು ತುರ್ತು ಸಂದರ್ಭಗಳಲ್ಲಿ ಇಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳೂ ದೊರಕುವುದಿಲ್ಲ. ಅಪಘಾತ, ಹೆರಿಗೆ, ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಇಲ್ಲಿನ ವೈದ್ಯರು ದೊಡ್ಡ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಾರೆಯೇ ವಿನಾ ಇಲ್ಲಿಯೇ ಚಿಕಿತ್ಸೆ ನೀಡಲು ಅವರ ಬಳಿ ಯಾವುದೇ ಸೌಲಭ್ಯಗಳಿಲ್ಲ. ಇನ್ನು ಸ್ಕಾ ನಿಂಗ್ ಸೌಲಭ್ಯವಂತೂ ಅಲಭ್ಯವಾಗಿದ್ದು, ಬಡವರ್ಗದ ಜನರು ಹೆಚ್ಚು ಹಣ ಪಾವತಿಸಿ ಖಾಸಗಿ ಸ್ಕಾ ನಿಂಗ್ ಸೆಂಟರ್‌ಗಳ ಮೊರೆ ಹೋಗಬೇಕಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಕಲ ಸೌಲಭ್ಯಗಳನ್ನು ಒದಗಿಸುವ ಜತೆಗೆ, ಸ್ಕಾ ನಿಂಗ್ ಯಂತ್ರೋಪಕರಣಗಳನ್ನೂ ಅಳವಡಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

26 mins ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

35 mins ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

1 hour ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

1 hour ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

2 hours ago

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

4 hours ago