ಓದುಗರ ಪತ್ರ

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ ಬಿಸಿ ಊಟಕ್ಕೆ ತರಕಾರಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ತಂದು ಜವಾಬ್ದಾರಿ ನಿರ್ವಹಿಸುವುದು, ಬಿಸಿಊಟಕ್ಕೆ ಮಕ್ಕಳ ಹಾಜರಾತಿಯನ್ನು ಆನ್‌ಲೈನಲ್ಲಿ ಹಾಕುವುದು, ಎಲ್‌ಬಿಎ, ಎಫ್‌ಎಲ್‌ಎನ್‌, ಓದು ಕರ್ನಾಟಕ, ಮರು ಸಿಂಚನ, ಮಕ್ಕಳ ಸ್ಯಾಟ್ಸ್ ನಿರ್ವಹಣೆ, ಯುಡೈಸ್ ಪ್ಲಸ್, ವಿದ್ಯಾವಾಹಿನಿ, ಇಕೋಕ್ಲಬ್ ದಾಖಲಿಕರಣ, ಶಿಕ್ಷಕರ ಆನ್‌ಲೈನ್‌ ಮೀಟಿಂಗ್ ಹಾಗೂ ತರಬೇತಿ….

ಇವೇ ಮೊದಲಾದ ಕಾರ್ಯಕ್ರಮಗಳನ್ನೂ ಪ್ರತಿದಿನ ಬೋಧನೆಯ ಬಿಡುವಿನ ವೇಳೆಯಲ್ಲಿ ತಮ್ಮ ಮೊಬೈಲ್ ನಲ್ಲಿಯೇ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇದು ಕಷ್ಟ ಸಾಧ್ಯವಾಗಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ.

ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಕಾಡುತ್ತಿದ್ದು, ಸಿಗ್ನಲ್ ಗಳು ಆಗಾಗ ಕೈಕೊಡುವುದರಿಂದ ಶಿಕ್ಷಕರು ಆಯಾ ದಿನದ ಕೆಲಸ ಕಾರ್ಯಗಳನ್ನು ಆನ್ ಲೈನ್‌ನಲ್ಲಿ ಅಂದೇ ಮುಗಿಸಬೇಕಾದ ಒತ್ತಡದಲ್ಲಿರುತ್ತಾರೆ. ಅಲ್ಲದೆ ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇ-ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಹೀಗಾಗಿ ಇವೆಲ್ಲ ಕೆಲಸ ಕಾರ್ಯಗಳನ್ನು ಶಿಕ್ಷಕರು ಬೋಧನೆಯ ನಡುವೆ ತಮ್ಮ ಮೊಬೈಲ್ ನಲ್ಲಿಯೇ ಮಾಡಲು ಕಾಲಹರಣವಾಗುತ್ತಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್‌ ಟಾಪ್ ಹಾಗೂ ವೈಫೈ ಸಂಪರ್ಕ ಕಲ್ಪಿಸಿಕೊಟ್ಟರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ದಾಖಲೀಕರಣ ಸುಗಮವಾಗಿ ನಡೆಯಲು ನೆರವಾದಂತಾಗುತ್ತದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago