ಓದುಗರ ಪತ್ರ

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ ಬಿಸಿ ಊಟಕ್ಕೆ ತರಕಾರಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ತಂದು ಜವಾಬ್ದಾರಿ ನಿರ್ವಹಿಸುವುದು, ಬಿಸಿಊಟಕ್ಕೆ ಮಕ್ಕಳ ಹಾಜರಾತಿಯನ್ನು ಆನ್‌ಲೈನಲ್ಲಿ ಹಾಕುವುದು, ಎಲ್‌ಬಿಎ, ಎಫ್‌ಎಲ್‌ಎನ್‌, ಓದು ಕರ್ನಾಟಕ, ಮರು ಸಿಂಚನ, ಮಕ್ಕಳ ಸ್ಯಾಟ್ಸ್ ನಿರ್ವಹಣೆ, ಯುಡೈಸ್ ಪ್ಲಸ್, ವಿದ್ಯಾವಾಹಿನಿ, ಇಕೋಕ್ಲಬ್ ದಾಖಲಿಕರಣ, ಶಿಕ್ಷಕರ ಆನ್‌ಲೈನ್‌ ಮೀಟಿಂಗ್ ಹಾಗೂ ತರಬೇತಿ….

ಇವೇ ಮೊದಲಾದ ಕಾರ್ಯಕ್ರಮಗಳನ್ನೂ ಪ್ರತಿದಿನ ಬೋಧನೆಯ ಬಿಡುವಿನ ವೇಳೆಯಲ್ಲಿ ತಮ್ಮ ಮೊಬೈಲ್ ನಲ್ಲಿಯೇ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇದು ಕಷ್ಟ ಸಾಧ್ಯವಾಗಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ.

ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಕಾಡುತ್ತಿದ್ದು, ಸಿಗ್ನಲ್ ಗಳು ಆಗಾಗ ಕೈಕೊಡುವುದರಿಂದ ಶಿಕ್ಷಕರು ಆಯಾ ದಿನದ ಕೆಲಸ ಕಾರ್ಯಗಳನ್ನು ಆನ್ ಲೈನ್‌ನಲ್ಲಿ ಅಂದೇ ಮುಗಿಸಬೇಕಾದ ಒತ್ತಡದಲ್ಲಿರುತ್ತಾರೆ. ಅಲ್ಲದೆ ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇ-ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಹೀಗಾಗಿ ಇವೆಲ್ಲ ಕೆಲಸ ಕಾರ್ಯಗಳನ್ನು ಶಿಕ್ಷಕರು ಬೋಧನೆಯ ನಡುವೆ ತಮ್ಮ ಮೊಬೈಲ್ ನಲ್ಲಿಯೇ ಮಾಡಲು ಕಾಲಹರಣವಾಗುತ್ತಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್‌ ಟಾಪ್ ಹಾಗೂ ವೈಫೈ ಸಂಪರ್ಕ ಕಲ್ಪಿಸಿಕೊಟ್ಟರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ದಾಖಲೀಕರಣ ಸುಗಮವಾಗಿ ನಡೆಯಲು ನೆರವಾದಂತಾಗುತ್ತದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

12 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago