ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ ಬಿಸಿ ಊಟಕ್ಕೆ ತರಕಾರಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ತಂದು ಜವಾಬ್ದಾರಿ ನಿರ್ವಹಿಸುವುದು, ಬಿಸಿಊಟಕ್ಕೆ ಮಕ್ಕಳ ಹಾಜರಾತಿಯನ್ನು ಆನ್ಲೈನಲ್ಲಿ ಹಾಕುವುದು, ಎಲ್ಬಿಎ, ಎಫ್ಎಲ್ಎನ್, ಓದು ಕರ್ನಾಟಕ, ಮರು ಸಿಂಚನ, ಮಕ್ಕಳ ಸ್ಯಾಟ್ಸ್ ನಿರ್ವಹಣೆ, ಯುಡೈಸ್ ಪ್ಲಸ್, ವಿದ್ಯಾವಾಹಿನಿ, ಇಕೋಕ್ಲಬ್ ದಾಖಲಿಕರಣ, ಶಿಕ್ಷಕರ ಆನ್ಲೈನ್ ಮೀಟಿಂಗ್ ಹಾಗೂ ತರಬೇತಿ….
ಇವೇ ಮೊದಲಾದ ಕಾರ್ಯಕ್ರಮಗಳನ್ನೂ ಪ್ರತಿದಿನ ಬೋಧನೆಯ ಬಿಡುವಿನ ವೇಳೆಯಲ್ಲಿ ತಮ್ಮ ಮೊಬೈಲ್ ನಲ್ಲಿಯೇ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇದು ಕಷ್ಟ ಸಾಧ್ಯವಾಗಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ.
ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಕಾಡುತ್ತಿದ್ದು, ಸಿಗ್ನಲ್ ಗಳು ಆಗಾಗ ಕೈಕೊಡುವುದರಿಂದ ಶಿಕ್ಷಕರು ಆಯಾ ದಿನದ ಕೆಲಸ ಕಾರ್ಯಗಳನ್ನು ಆನ್ ಲೈನ್ನಲ್ಲಿ ಅಂದೇ ಮುಗಿಸಬೇಕಾದ ಒತ್ತಡದಲ್ಲಿರುತ್ತಾರೆ. ಅಲ್ಲದೆ ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇ-ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಹೀಗಾಗಿ ಇವೆಲ್ಲ ಕೆಲಸ ಕಾರ್ಯಗಳನ್ನು ಶಿಕ್ಷಕರು ಬೋಧನೆಯ ನಡುವೆ ತಮ್ಮ ಮೊಬೈಲ್ ನಲ್ಲಿಯೇ ಮಾಡಲು ಕಾಲಹರಣವಾಗುತ್ತಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸಂಪರ್ಕ ಕಲ್ಪಿಸಿಕೊಟ್ಟರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ದಾಖಲೀಕರಣ ಸುಗಮವಾಗಿ ನಡೆಯಲು ನೆರವಾದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…