ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸರ್ಕಾರಿ ನೌಕರರು, ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ ಮತ್ತು ಬೆಳಗಿನ ವೇಳೆಯಲ್ಲಿ ಕಡಿಮೆ ಬಸ್ಗಳು ಓಡಾಡುವುದರಿಂದ ಬಸ್ಗಳಲ್ಲಿ, ನಿಗದಿತ ಆಸನಗಳಿಗೆ ಮೀರಿ ವಿಪರೀತ ಜನಸಂದಣಿಯೊಂದಿಗೆ ಪ್ರಯಾಣ ಮಾಡುವಂತಾಗಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಿ. ನರಸೀಪುರ – ಬನ್ನೂರು-ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಹೆಚ್ಚಿನ ಬಸ್ಗಳ ಸೌಲಭ್ಯ ಕಲ್ಪಿಸಲು ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.
-ಎಸ್.ಕುಮಾರ, ಮಾವಿನಹಳ್ಳಿ, ಮೈಸೂರು




